<p><strong>ಹುಬ್ಬಳ್ಳಿ:</strong> ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಲಪ್ಪ ಆಚಾರ ಹೇಳಿದರು.</p>.<p>ದುರಂತ ನಡೆದ ಕಾರ್ಖಾನೆಗೆ ಹಾಗೂ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ಭಾನುವಾರ ವಿಚಾರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.<br /><br />ಕುಟುಂಬ ಕಲ್ಯಾಣ ಇಲಾಖೆಯಿಂದ ಮೃತರ ಮಕ್ಕಳಿಗೆ ಮೂರು ವರ್ಷ ಅನುದಾನ ನೀಡಬಹುದು. ಆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುದು. ಚಿಕ್ಕ ಮಕ್ಕಳನ್ನು ಬಾಲ ಮಂದಿರಕ್ಕೆ ಕಳುಹಿಸಲು ಕುಟುಂಬದವರು ಒಪ್ಪಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಧಾರವಾಡ ಜಿಲ್ಲೆಯ ಎಂಟು ವಲಯಗಳಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳ ಸಮೀಕ್ಷೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಮೂರು ದಿನಗಳಲ್ಲಿ ನೀಡುವಂತೆ ಸೂಚಿಸಿದ್ದು, ಅನುಮತಿ ಪಡೆಯದ ಕಾರ್ಖಾನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಬಕೈಗೊಂಡು ಬಂದ್ ಮಾಡಲಾಗುವುದು ಎಂದರು.</p>.<p>ಅಗ್ನಿ ದುರಂತಕ್ಕೆ ಕಾರಣವಾದ ಸ್ಪಾರ್ಕ್ ಕ್ಯಾಂಡಲ್ ಉತ್ಪಾದಿಸುವ ಕಾರ್ಖಾನೆ ಯಾವುದೇ ಅನುಮತಿ ಪಡೆದಿರಲಿಲ್ಲ. ಲೋಪ ಎಸಗಿದ ಅಧಿಕಾರಿಗಳ ಹಾಗೂ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪು ಎಸಗಿದವರ ಹೆಡೆಮುರಿ ಕಟ್ಟಲಾಗುವುದು ಎಂದು ಹೇಳಿದರು.</p>.<p><strong>ಓದಿ... <a href="https://www.prajavani.net/district/dharwad/hubli-tarihal-factory-tragedy-fire-accident-three-workers-death-957121.html" target="_blank">ಹುಬ್ಬಳ್ಳಿಯ ತಾರಿಹಾಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಲಪ್ಪ ಆಚಾರ ಹೇಳಿದರು.</p>.<p>ದುರಂತ ನಡೆದ ಕಾರ್ಖಾನೆಗೆ ಹಾಗೂ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ಭಾನುವಾರ ವಿಚಾರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.<br /><br />ಕುಟುಂಬ ಕಲ್ಯಾಣ ಇಲಾಖೆಯಿಂದ ಮೃತರ ಮಕ್ಕಳಿಗೆ ಮೂರು ವರ್ಷ ಅನುದಾನ ನೀಡಬಹುದು. ಆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುದು. ಚಿಕ್ಕ ಮಕ್ಕಳನ್ನು ಬಾಲ ಮಂದಿರಕ್ಕೆ ಕಳುಹಿಸಲು ಕುಟುಂಬದವರು ಒಪ್ಪಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಧಾರವಾಡ ಜಿಲ್ಲೆಯ ಎಂಟು ವಲಯಗಳಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳ ಸಮೀಕ್ಷೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಮೂರು ದಿನಗಳಲ್ಲಿ ನೀಡುವಂತೆ ಸೂಚಿಸಿದ್ದು, ಅನುಮತಿ ಪಡೆಯದ ಕಾರ್ಖಾನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಬಕೈಗೊಂಡು ಬಂದ್ ಮಾಡಲಾಗುವುದು ಎಂದರು.</p>.<p>ಅಗ್ನಿ ದುರಂತಕ್ಕೆ ಕಾರಣವಾದ ಸ್ಪಾರ್ಕ್ ಕ್ಯಾಂಡಲ್ ಉತ್ಪಾದಿಸುವ ಕಾರ್ಖಾನೆ ಯಾವುದೇ ಅನುಮತಿ ಪಡೆದಿರಲಿಲ್ಲ. ಲೋಪ ಎಸಗಿದ ಅಧಿಕಾರಿಗಳ ಹಾಗೂ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪು ಎಸಗಿದವರ ಹೆಡೆಮುರಿ ಕಟ್ಟಲಾಗುವುದು ಎಂದು ಹೇಳಿದರು.</p>.<p><strong>ಓದಿ... <a href="https://www.prajavani.net/district/dharwad/hubli-tarihal-factory-tragedy-fire-accident-three-workers-death-957121.html" target="_blank">ಹುಬ್ಬಳ್ಳಿಯ ತಾರಿಹಾಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>