ಹುಬ್ಬಳ್ಳಿ: ‘ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಎಲ್ಲರೂ ನಿರಪರಾಧಿಗಳು ಎಂದು ನಾವೂ ಎಲ್ಲಿಯೂ ಹೇಳಿಲ್ಲ. ಅಮಾಯಕರನ್ನು ಆದಷ್ಟು ಬೇಗ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದೇವೆಯೇ ಹೊರತು, ಈಗ ಬಂಧಿಸಲಾಗಿರುವ ಎಲ್ಲರಿಗೂ ಜಾಮೀನು ಕೊಡಿ ಎಂದು ಕೇಳಿಲ್ಲ’ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ ಹುಸೇನ್ ಹಳ್ಳೂರ ಹೇಳಿದ್ದಾರೆ.