ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸಿ: ಶಾಸಕ ಸಿ.ಎಂ. ನಿಂಬಣ್ಣವರ

Last Updated 14 ಆಗಸ್ಟ್ 2022, 2:35 IST
ಅಕ್ಷರ ಗಾತ್ರ

ಅಳ್ನಾವರ: ‘ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನದಿಂದ ಸ್ವಾತಂತ್ರ್ಯ ದೊರೆತಿದೆ. ಬದುಕು ಕಟ್ಟಿಕೊಟ್ಟ ಮಹನೀಯರನ್ನು ಸ್ಮರಿಸುವುದು ನಮ್ಮ ಕರ್ತವ್ಯ’ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.

ಪಟ್ಟಣದಲ್ಲಿ ರಾಷ್ಟ್ರಧ್ವಜ ವಿತರಿಸಿ ಮಾತನಾಡಿ, ‘ಕಲಘಟಗಿ ಕ್ಷೇತ್ರದಲ್ಲಿ ಪ್ರತಿ ಮನೆಯ ಮೇಲೆ ತಿರಂಗಾ ರಾರಾಜಿಸುತ್ತಿದೆ’ ಎಂದರು.

ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ನೇತ್ರಾವತಿ ಕಡಕೋಳ, ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ನಾರಾಯಣ ಮೋರೆ, ಶಿವಾಜಿ ಡೊಳ್ಳಿನ, ಪ್ರವೀಣ ಪವಾರ, ಸಂತೋಷ ಕಮ್ಮಾರ, ಯಲ್ಲಾರಿ ಹುಬ್ಳಿಕರ, ಅನ್ನಪೂರ್ಣ ಕೌಜಲಗಿ, ಅಮೂಲ ಗುಂಜಿಕರ ಇದ್ದರು.

ಬೆಳಿಗ್ಗೆ ಪಟ್ಟಣದ ಶಾಲಾ ಮಕ್ಕಳು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ‘ಭಾರತ ಮತಾಕಿ ಜೈ’ ಘೋಷಣೆ ಕೂಗುತ್ತಾ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿದರು. ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ದಿರಿಸು ಧರಿಸಿ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT