‘ನಮ್ಮ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆಗೆ ಪಾಕಿಸ್ತಾನ ಕಾರಣ ಎಂದು ನಾವು ದೂರುತ್ತಾ ಬಂದಿದ್ದೇವೆ. ಈ ನಿಟ್ಟಿನಲ್ಲಿ ಭಾರತವು ವಿಶ್ವಸಂಸ್ಥೆ ಸೇರಿದಂತೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿ ಮಾಡಲು ಯಶಸ್ವಿಯಾಗಿದೆ. ಹಾಗಾಗಿ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು. ಒಂದು ವೇಳೆ, ಪೊಲೀಸರೇ ಬಾಂಬ್ ಇಟ್ಟಿದ್ದಾರೆ ಎಂದು ಕುಮಾರಸ್ವಾಮಿ ಅವರಿಗೆ ಗೊತ್ತಿದ್ದರೆ, ಪ್ರಕರಣ ದಾಖಲಿಸಲಿ’ ಎಂದು ಸವಾಲು ಹಾಕಿದರು.