ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ ಅವರಿಗೆ, ಪಾಲಿಕೆಯ ಹೆಚ್ಚುವರಿ ಆಯುಕ್ತರಾಗಿ ನಗರಾಭಿವೃದ್ಧಿ ಇಲಾಖೆ ಬುಧವಾರ ಬಡ್ತಿ ನೀಡಿದೆ.
ಪಾಲಿಕೆಯಲ್ಲಿ ಖಾಲಿ ಇರುವ ಹೆಚ್ಚುವರಿ ಆಯುಕ್ತರ ಹುದ್ದೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ, ಎರಡು ವರ್ಷದ ಅವಧಿಗೆ ಶಂಕರಾನಂದ ಅವರನ್ನು ನಿಯೋಜಿಸಿ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ವೀಣಾ ಆದೇಶ ಹೊರಡಿಸಿದ್ದಾರೆ.