ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹು–ಧಾ ಪಾಲಿಕೆ ಮೇಯರ್‌ ಚುನಾವಣೆ ಫೆಬ್ರುವರಿಯಲ್ಲಿ: ಮಹೇಶ ಟೆಂಗಿನಕಾಯಿ ಹೇಳಿಕೆ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿಕೆ
Last Updated 18 ಜನವರಿ 2022, 4:51 IST
ಅಕ್ಷರ ಗಾತ್ರ

ಹುಬ್ಬಳ್ಳಿ:‘ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಕುರಿತು ಹುಬ್ಬಳ್ಳಿಯಲ್ಲಿ ನಡೆದಿದ್ದ ಕಾರ್ಯಕಾರಿಣಿಯಲ್ಲಿ ಚರ್ಚೆಯಾಗಿದೆ. ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ’ ಎಂದುಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಜಿಲ್ಲೆಯ ಜನಪ್ರತಿನಿಧಿಗಳು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದರು.

‘ವರ್ಷದಲ್ಲಿ 157 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಅಂದಾಜು 66 ಕೋಟಿ ಜನ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ’ ಎಂದು ಹೇಳಿದರು.

‘ಪ್ರತಿ ದಿನ ಸರಾಸರಿ 43 ಲಕ್ಷ ಡೋಸ್‌ಗಳನ್ನು ನೀಡಲಾಗುತ್ತಿದೆ.ಯಾವುದೇ ಗುರುತಿನ ಚೀಟಿ ಇಲ್ಲದ 67 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ಹಾಕಲಾಗಿದೆ. ಇಲ್ಲಿಯವರೆಗೆ 3.31 ಕೋಟಿ ಮಕ್ಕಳು ಲಸಿಕೆ ಪಡೆದಿದ್ದಾರೆ. ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ಅಪಪ್ರಚಾರದ ನಡುವೆಯೂ, ಲಸಿಕೆ ಅಭಿಯಾನ ಯಶಸ್ವಿಯಾಗಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿ, ‘ಪರಿಷತ್‌ ಸದಸ್ಯರ ಅನುದಾನದಲ್ಲಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ಗೆ ₹36 ಲಕ್ಷ ವೆಚ್ಚದಲ್ಲಿ ಎರಡು ಬೊಲೆರೊ ವಾಹನಗಳನ್ನು ನೀಡಲಾಗಿದೆ’ ಎಂದರು.

ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ ಕಪಟಕರ, ‘ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದಕ್ಕಾಗಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೇ ವಾರ್ಡ್‌ಗಳ ಭೇಟಿ ಆರಂಭಿಸಿದ್ದೇನೆ. ಸ್ಥಳೀಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜೊತೆ ಮಾತುಕತೆ ನಡೆಸುತ್ತಿದ್ದೇನೆ’ ಎಂದು ತಿಳಿಸಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಜಿಲ್ಲಾ ವಕ್ತಾರ ರವಿ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT