ಹುಬ್ಬಳ್ಳಿ: ನಗರದ ಕೃಷ್ಣಭವನದ ಮುಂದೆ ಶುಕ್ರವಾರ ತಡರಾತ್ರಿ ಮಹಿಳೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ದಾವಣಗೆರೆಯ ಸುಮಾ (38) ಕೊಲೆಯಾದವರು. ಇವರು ಬಳ್ಳಾರಿಯ ವ್ಯಕ್ತಿಯನ್ನು ಮದುವೆಯಾಗಿ ವರ್ಷದ ಹಿಂದೆ ಹುಬ್ಬಳ್ಳಿಗೆ ಬಂದು ನೆಲೆಸಿದ್ದು, ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದರು.
‘ಅಪರಿಚಿತರ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಮಾ ಅವರನ್ನು ಸ್ಥಳೀಯರೇ ಕಿಮ್ಸ್ಗೆ ದಾಖಲು ಮಾಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಟ್ಟಿದ್ದಾರೆ‘ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹುಬ್ಬಳ್ಳಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶವಪತ್ತೆ: ಇಲ್ಲಿನ ಹೊರವಲಯದಲ್ಲಿ ರೈಲು ಹಳಿಯ ಮೇಲೆ ಶುಕ್ರವಾರ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಮೃತರ ವಿವರತಿಳಿದುಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.