ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕೋವಿಡ್ನಿಂದಾಗಿ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದಿದೆ. ಅನೇಕರಿಗೆ ಸರ್ಕಾರ ನೆರವಾಗಿದೆ. ಎಲ್ಲರಿಗೂ ಸರ್ಕಾರವೇ ನೆರವಾಗಬೇಕು ಎಂದು ಕಾಯುತ್ತಿದ್ದರೆ ಆಗುವುದಿಲ್ಲ. ಆದ್ದರಿಂದ ಸ್ವಂತ ಖರ್ಚಿನಿಂದ ಕಲಾವಿದರಿಗೆ ನೆರವಾಗುತ್ತಿದ್ದೇನೆ. ರಾಜ್ಯದಲ್ಲಿ 600ರಿಂದ 700 ಕಲಾವಿದರನ್ನು ಈಗಾಗಲೇ ಗುರುತಿಸಲಾಗಿದ್ದು, ಅವರಿಗೆ ಅರೋಗ್ಯದ ಸಂಪೂರ್ಣ ಖರ್ಚು ನಾನು ನೋಡಿಕೊಳ್ಳುತ್ತಿದ್ದೇನೆ. ಅವರಿಗೆ ಆರೋಗ್ಯ ಕಾರ್ಡ್ ನೀಡುತ್ತೇವೆ’ ಎಂದರು.