<p><strong>ಹುಬ್ಬಳ್ಳಿ:</strong> ‘ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರಸ್ತುತ ವರ್ಷ ಮಂಡಿಸಲಿರುವ ಬಜೆಟ್ನಲ್ಲಿ ಪತ್ರಕರ್ತರಿಗೆ ಆರೋಗ್ಯ ವಿಮೆ ಘೋಷಣೆ ಮಾಡಲು ಯೋಜಿಸಲಾಗಿದೆ. ಪಾಲಿಕೆ ವತಿಯಿಂದ ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದು ಮೇಯರ್ ಜ್ಯೋತಿ ಪಾಟೀಲ ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಮೂರುಸಾವಿರಮಠದ ಮೂಜಗಂ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ‘ಮಹಿಳೆಯರಿಗೆ ರಂಗೋಲಿ ಹಾಗೂ ಅಡುಗೆ ಸ್ಪರ್ಧೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ ಹಾಗೂ ಕುಟುಂಬದವರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ, ಅವರಲ್ಲಿರುವ ಸೃಜನಶೀಲತೆಯನ್ನು ಹೊರಹಾಕಲು ಯತ್ನಿಸಿದ ಕಾರ್ಯ ಶ್ಲಾಘನೀಯ. ಸುದ್ದಿಮನೆಯಲ್ಲಿಯೇ ಹೆಚ್ಚಿನ ಸಮಯ ಕಳೆಯುವ ಮಹಿಳಾ ಪತ್ರಕರ್ತರಿಗೆ, ಇಂತಹ ಕಾರ್ಯಕ್ರಮ ಹೊಸತನ ನೀಡಲು ಸಾಧ್ಯವಾಗುತ್ತದೆ’ ಎಂದರು.</p>.<p>ಮಜೇಥಿಯಾ ಫೌಂಡೇಷನ್ ಅಧ್ಯಕ್ಷೆ ನಂದಿನಿ ಕಶ್ಯಪ್ ಮಾತನಾಡಿ, ‘ಇಂದಿನ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸುತ್ತಿದ್ದಾಳೆ. ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಗಟ್ಟಿಯಾಗಿ ನೆಲೆಯೂರಿ, ಅಸಾಮಾನ್ಯ ಸಾಧನೆ ಮಾಡುತ್ತಿದ್ದಾಳೆ’ ಎಂದರು.</p>.<p>ಪತ್ರಕರ್ತರ ಸಂಘದ ಖಜಾಂಚಿ ತನುಜಾ ನಾಯಕ ಅಧ್ಯಕ್ಷತೆ ವಹಿಸಿದ್ದರು. ರಂಗೋಲಿ ಸ್ಪರ್ಧೆ ಹಾಗೂ ಅಡುಗೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಿರ್ಣಾಯಕರಾಗಿ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗೋಟಿಯವರ, ಸವಿತಾ ಬೆಣಗಿ, ಕಾಶಿಬಾಯಿ ಕ್ಯಾಡಗಿ ಮತ್ತು ಅಕ್ಕಮ್ಮ ಒಡಕಪ್ಪನವರ ಪಾಲ್ಗೊಂಡಿದ್ದರು.</p>.<p><strong>ಸ್ಪರ್ಧೆಯ ವಿಜೇತರು...</strong> </p><p><strong>ರಂಗೋಲಿ ಸ್ಪರ್ಧೆ:</strong> ವೀಣಾ ಚಳಗೇರಿ (ಪ್ರಥಮ) ಅನುಷಾ ಕಮತರ (ದ್ವಿತೀಯ) ಚೈತನ್ಯಾದೇವಿ ಗುದಗಯ್ಯನವರಮಠ (ತೃತೀಯ) ವಿಜಯಲಕ್ಷ್ಮಿ ಪತ್ತಾರ ವೀಣಾ ಕುಂಬಾರ ರೋಹಿಣಿ ಅಂಗಡಿ ಲಲಿತಾ ಹೂಗಾರ ಹಾಗೂ ರೂಪಾ ಗೊಂಬಿ (ಸಮಾಧಾನಕರ ಬಹುಮಾನ). </p><p><strong>ಅಡುಗೆ ಸ್ಪರ್ಧೆ:</strong> ಶುಭಾ ಹೆಗಡೆ (ಪ್ರಥಮ) ಸುನಂದಾ ಮೆಣಸಿನಕಾಯಿ (ದ್ವಿತೀಯ) ಲಲಿತಾ ಹೂಗಾರ (ತೃತೀಯ) ರೂಪಾ ಕಣವಿ ಸಾವಿತ್ರಿ ಶಿವಪುರ ವೇದಾ ಕಮತರ ಮಂಜುಳಾ ಹುಲಕೊಪ್ಪ ಕವಿತಾ ಬಡಿಗೇರ (ಸಮಾಧಾನಕರ ಬಹುಮಾನ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರಸ್ತುತ ವರ್ಷ ಮಂಡಿಸಲಿರುವ ಬಜೆಟ್ನಲ್ಲಿ ಪತ್ರಕರ್ತರಿಗೆ ಆರೋಗ್ಯ ವಿಮೆ ಘೋಷಣೆ ಮಾಡಲು ಯೋಜಿಸಲಾಗಿದೆ. ಪಾಲಿಕೆ ವತಿಯಿಂದ ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದು ಮೇಯರ್ ಜ್ಯೋತಿ ಪಾಟೀಲ ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಮೂರುಸಾವಿರಮಠದ ಮೂಜಗಂ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ‘ಮಹಿಳೆಯರಿಗೆ ರಂಗೋಲಿ ಹಾಗೂ ಅಡುಗೆ ಸ್ಪರ್ಧೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ ಹಾಗೂ ಕುಟುಂಬದವರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ, ಅವರಲ್ಲಿರುವ ಸೃಜನಶೀಲತೆಯನ್ನು ಹೊರಹಾಕಲು ಯತ್ನಿಸಿದ ಕಾರ್ಯ ಶ್ಲಾಘನೀಯ. ಸುದ್ದಿಮನೆಯಲ್ಲಿಯೇ ಹೆಚ್ಚಿನ ಸಮಯ ಕಳೆಯುವ ಮಹಿಳಾ ಪತ್ರಕರ್ತರಿಗೆ, ಇಂತಹ ಕಾರ್ಯಕ್ರಮ ಹೊಸತನ ನೀಡಲು ಸಾಧ್ಯವಾಗುತ್ತದೆ’ ಎಂದರು.</p>.<p>ಮಜೇಥಿಯಾ ಫೌಂಡೇಷನ್ ಅಧ್ಯಕ್ಷೆ ನಂದಿನಿ ಕಶ್ಯಪ್ ಮಾತನಾಡಿ, ‘ಇಂದಿನ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸುತ್ತಿದ್ದಾಳೆ. ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಗಟ್ಟಿಯಾಗಿ ನೆಲೆಯೂರಿ, ಅಸಾಮಾನ್ಯ ಸಾಧನೆ ಮಾಡುತ್ತಿದ್ದಾಳೆ’ ಎಂದರು.</p>.<p>ಪತ್ರಕರ್ತರ ಸಂಘದ ಖಜಾಂಚಿ ತನುಜಾ ನಾಯಕ ಅಧ್ಯಕ್ಷತೆ ವಹಿಸಿದ್ದರು. ರಂಗೋಲಿ ಸ್ಪರ್ಧೆ ಹಾಗೂ ಅಡುಗೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಿರ್ಣಾಯಕರಾಗಿ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗೋಟಿಯವರ, ಸವಿತಾ ಬೆಣಗಿ, ಕಾಶಿಬಾಯಿ ಕ್ಯಾಡಗಿ ಮತ್ತು ಅಕ್ಕಮ್ಮ ಒಡಕಪ್ಪನವರ ಪಾಲ್ಗೊಂಡಿದ್ದರು.</p>.<p><strong>ಸ್ಪರ್ಧೆಯ ವಿಜೇತರು...</strong> </p><p><strong>ರಂಗೋಲಿ ಸ್ಪರ್ಧೆ:</strong> ವೀಣಾ ಚಳಗೇರಿ (ಪ್ರಥಮ) ಅನುಷಾ ಕಮತರ (ದ್ವಿತೀಯ) ಚೈತನ್ಯಾದೇವಿ ಗುದಗಯ್ಯನವರಮಠ (ತೃತೀಯ) ವಿಜಯಲಕ್ಷ್ಮಿ ಪತ್ತಾರ ವೀಣಾ ಕುಂಬಾರ ರೋಹಿಣಿ ಅಂಗಡಿ ಲಲಿತಾ ಹೂಗಾರ ಹಾಗೂ ರೂಪಾ ಗೊಂಬಿ (ಸಮಾಧಾನಕರ ಬಹುಮಾನ). </p><p><strong>ಅಡುಗೆ ಸ್ಪರ್ಧೆ:</strong> ಶುಭಾ ಹೆಗಡೆ (ಪ್ರಥಮ) ಸುನಂದಾ ಮೆಣಸಿನಕಾಯಿ (ದ್ವಿತೀಯ) ಲಲಿತಾ ಹೂಗಾರ (ತೃತೀಯ) ರೂಪಾ ಕಣವಿ ಸಾವಿತ್ರಿ ಶಿವಪುರ ವೇದಾ ಕಮತರ ಮಂಜುಳಾ ಹುಲಕೊಪ್ಪ ಕವಿತಾ ಬಡಿಗೇರ (ಸಮಾಧಾನಕರ ಬಹುಮಾನ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>