<p><strong>ಹುಬ್ಬಳ್ಳಿ:</strong> ‘ಸಾಂಕ್ರಾಮಿಕವಲ್ಲದ ರೋಗಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ. ಇದನ್ನು ತಡೆಗಟ್ಟಲು ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲು ವಿಶೇಷ ಯೋಜನೆ ರೂಪಿಸಲಾಗುತ್ತಿದ್ದು, ಎರಡು ತಿಂಗಳಲ್ಲಿ ಅನುಷ್ಠಾನಗೊಳಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>‘ಇದಕ್ಕಾಗಿ 70 ವಾಹನಗಳ ಖರೀದಿಗೆ ಶೀಘ್ರ ಟೆಂಡರ್ ಕರೆಯಲಾಗುವುದು. ಹ್ಯಾಂಡ್ ಹೆಲ್ಡ್ ಎಕ್ಸ್–ರೇ ಯಂತ್ರಗಳನ್ನು ಖರೀದಿಸಲಾಗುತ್ತಿದ್ದು, ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗುವುದು. ನಂತರ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು‘ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವೈದ್ಯರು, ಶುಶ್ರೂಷಕರು, ತಂತಜ್ಞರು ಈ ತಂಡದಲ್ಲಿ ಇರುತ್ತಾರೆ. ದಂತ, ನೇತ್ರ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ ಮಾಡಿ ಔಷಧ, ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಹಿಂದಿನ ಸರ್ಕಾರ ಆರಂಭಿಸಿದ್ದ ‘ನಮ್ಮ ಕ್ಲಿನಿಕ್’ಗಳನ್ನು ಮುಂದುವರಿಸಿ, ಅವುಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು. ಜನರ ಅನುಕೂಲಕ್ಕಾಗಿ ಇವು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಎಲ್ಲ ಅವ್ಯವಹಾರಗಳ ತನಿಖೆ:</p>.<p>‘ಹಿಂದಿನ ಸರ್ಕಾರದಲ್ಲಿ ನಡೆದಿದ್ದ ಭ್ರಷ್ಟಾಚಾರ, ಹಗರಣಗಳನ್ನು ಜನರ ಮುಂದಿಟ್ಟಿದ್ದೆವು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಪ್ರಕರಣವನ್ನು ತಾರ್ಕಿಕ ಅಂತ್ಯಗೊಳಿಸಬೇಕು ಎಂಬ ಉದ್ದೇಶದಿಂದ ಕೋವಿಡ್ ಹಗರಣದ ತನಿಖೆಗೆ ಸರ್ಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸರ್ಕಾರ ವಿಚಾರಣಾ ಆಯೋಗ ರಚಿಸಿದೆ’ ಎಂದು ಹೇಳಿದರು.</p>.<p>‘ತನಿಖೆಗೆ ಆದೇಶ ಮಾಡದಿದ್ದರೆ ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಬಿಜೆಪಿಯವರು ದೂರುತ್ತಾರೆ. ತನಿಖೆ ಮಾಡಿಸಿದರೆ ದ್ವೇಷದ ರಾಜಕಾರಣ ಎನ್ನುತ್ತಾರೆ. ಈ ಹಿಂದೆ ನಾವು ಆರೋಪ ಮಾಡಿರುವ ಪ್ರಕಾರ ಈಗ ತನಿಖೆಗೆ ಆದೇಶಿಸಲಾಗಿದೆ. ತಪ್ಪು ಮಾಡಿಲ್ಲವಾದರೆ ಬಿಜೆಪಿ ನಾಯಕರಿಗೆ ಭಯವೇಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಸಾಂಕ್ರಾಮಿಕವಲ್ಲದ ರೋಗಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ. ಇದನ್ನು ತಡೆಗಟ್ಟಲು ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲು ವಿಶೇಷ ಯೋಜನೆ ರೂಪಿಸಲಾಗುತ್ತಿದ್ದು, ಎರಡು ತಿಂಗಳಲ್ಲಿ ಅನುಷ್ಠಾನಗೊಳಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>‘ಇದಕ್ಕಾಗಿ 70 ವಾಹನಗಳ ಖರೀದಿಗೆ ಶೀಘ್ರ ಟೆಂಡರ್ ಕರೆಯಲಾಗುವುದು. ಹ್ಯಾಂಡ್ ಹೆಲ್ಡ್ ಎಕ್ಸ್–ರೇ ಯಂತ್ರಗಳನ್ನು ಖರೀದಿಸಲಾಗುತ್ತಿದ್ದು, ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗುವುದು. ನಂತರ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು‘ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವೈದ್ಯರು, ಶುಶ್ರೂಷಕರು, ತಂತಜ್ಞರು ಈ ತಂಡದಲ್ಲಿ ಇರುತ್ತಾರೆ. ದಂತ, ನೇತ್ರ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ ಮಾಡಿ ಔಷಧ, ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಹಿಂದಿನ ಸರ್ಕಾರ ಆರಂಭಿಸಿದ್ದ ‘ನಮ್ಮ ಕ್ಲಿನಿಕ್’ಗಳನ್ನು ಮುಂದುವರಿಸಿ, ಅವುಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು. ಜನರ ಅನುಕೂಲಕ್ಕಾಗಿ ಇವು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಎಲ್ಲ ಅವ್ಯವಹಾರಗಳ ತನಿಖೆ:</p>.<p>‘ಹಿಂದಿನ ಸರ್ಕಾರದಲ್ಲಿ ನಡೆದಿದ್ದ ಭ್ರಷ್ಟಾಚಾರ, ಹಗರಣಗಳನ್ನು ಜನರ ಮುಂದಿಟ್ಟಿದ್ದೆವು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಪ್ರಕರಣವನ್ನು ತಾರ್ಕಿಕ ಅಂತ್ಯಗೊಳಿಸಬೇಕು ಎಂಬ ಉದ್ದೇಶದಿಂದ ಕೋವಿಡ್ ಹಗರಣದ ತನಿಖೆಗೆ ಸರ್ಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸರ್ಕಾರ ವಿಚಾರಣಾ ಆಯೋಗ ರಚಿಸಿದೆ’ ಎಂದು ಹೇಳಿದರು.</p>.<p>‘ತನಿಖೆಗೆ ಆದೇಶ ಮಾಡದಿದ್ದರೆ ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಬಿಜೆಪಿಯವರು ದೂರುತ್ತಾರೆ. ತನಿಖೆ ಮಾಡಿಸಿದರೆ ದ್ವೇಷದ ರಾಜಕಾರಣ ಎನ್ನುತ್ತಾರೆ. ಈ ಹಿಂದೆ ನಾವು ಆರೋಪ ಮಾಡಿರುವ ಪ್ರಕಾರ ಈಗ ತನಿಖೆಗೆ ಆದೇಶಿಸಲಾಗಿದೆ. ತಪ್ಪು ಮಾಡಿಲ್ಲವಾದರೆ ಬಿಜೆಪಿ ನಾಯಕರಿಗೆ ಭಯವೇಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>