‘ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯೊಳಗೆ ಸಿಲುಕಿರುವ ವಿಷಯ ತಿಳಿಯುತ್ತಿದ್ದಂತೆ, ಎಸ್ಡಿಎಂಸಿ ಸದಸ್ಯರೊಂದಿಗೆ ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ತೆರಳಿದೆವು. ನೀರಿನ ಹರಿವು ತಗ್ಗುವವರೆಗೆ ಹೊರ ಬಾರದೆ, ಒಳಗೆ ಇರುವಂತೆ ಶಿಕ್ಷಕರಿಗೆ ಸೂಚಿಸಿದೆವು. ರಾತ್ರಿ 7.30ರ ಸುಮಾರಿಗೆ ನೀರಿನ ಪ್ರಮಾಣ ತಗ್ಗಿದ ಬಳಿಕ ಟ್ರಾಕ್ಟರ್ನಲ್ಲಿ ಎಲ್ಲರನ್ನೂ ಸುರಕ್ಷಿತವಾಗಿ ಕರೆತಂದೆವು’ ಎಂದು ಬೆಳವಟಗಿ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಹಂಪಿಹೊಳಿ ತಿಳಿಸಿದರು.