ಮಳೆ ಅಬ್ಬರಕ್ಕೆ ನಗರದ ಅನೇಕ ರಸ್ತೆಗಳು ಜಲಾವೃತವಾದವು. ಉಣಕಲ್ ಕೆಳ ಸೇತುವೆ ರಸ್ತೆ, ಸ್ಟೇಷನ್ ರಸ್ತೆ, ಜನತಾ ಬಜಾರ್, ದಾಜಿಬಾನ ಪೇಟೆಯ ಸಹಸ್ರಾರ್ಜುನ ವೃತ್ತ, ವಿದ್ಯಾನಗರ, ಕಾರವಾರ ರಸ್ತೆ, ಹೊಸೂರು ವೃತ್ತ ಸೇರಿದಂತೆ ನಗರದ ಹಲವು ರಸ್ತೆಗಳು ಕೆಲ ಹೊತ್ತು ಹಳ್ಳಗಳಂತಾದವು. ರಸ್ತೆ, ಒಳ ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿರುವ ರಸ್ತೆಗಳಲ್ಲಿ ಮಳೆ ನೀರಿನಿಂದಾಗಿ ಸಂಚಾರ ದುಸ್ತರವಾಯಿತು.