ಹುಬ್ಬಳ್ಳಿ: ಕುಂದಗೋಳ ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ, ಚಿಕ್ಕನೇರ್ತಿ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದೆ. ರಾತ್ರಿ 8.30ರ ಹೊತ್ತಿಗೆ ಆರಂಭವಾದ ಮಳೆ ಬಿಡದೆ ಸುರಿಯಿತು. ಇದರಿಂದಾಗಿ ರಸ್ತೆಗಳು ಸಹ ಜಲಾವೃತಗೊಂಡಿವೆ.
ಗ್ರಾಮದ ತಗ್ಗು ಪ್ರದೇಶಗಳಲ್ಲಿ ಇರುವ ನಾಗಪ್ಪ ಶೆಟ್ಟಿ, ಮಂಜುನಾಥ ಮಾಯಣ್ಣವರ, ಬಸವಣ್ಣಪ್ಪ ಮಾಯಣ್ಣವರ ಮನೆ ಸೇರಿದಂತೆ ಹಲವು ಮನೆಗಳ ಸುತ್ತಮುತ್ತ ನೀರು ಆವರಿಸಿಕೊಂಡಿದೆ. ಹೆಚ್ಚಿನ ನಿಂತಿರುವ ಕುಟುಂಬದವರು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.