ಧಾರವಾಡ: ಕೊಲೆ ಪ್ರಕರಣದ ಆರೋಪದಲ್ಲಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧವಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಅವರು ಧಾರವಾಡ ಪ್ರವೇಶಿಸಿ ಮತ ಚಲಾಯಿಸಲು ಹೈಕೋರ್ಟ್ ಅನಮತಿ ನೀಡಿದೆ.
ಅವರು ಮತ ಚಲಾಯಿಸಲಿರುವ ಧಾರವಾಡದ ಸಪ್ತಾಪೂರದ ಶಾರದಾ ವಿದ್ಯಾಲಯದ ಆವರಣದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಬಿಜೆಪಿ ಮುಖಂಡರಾಗಿದ್ದ ಯೋಗಿಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪವನ್ನು ವಿನಯ್ ಎದುರಿಸುತ್ತಿದ್ದಾರೆ.