ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೆ.ಎಸ್. ಈಶ್ವರಪ್ಪ ವಿರುದ್ಧ ಮುಖ್ಯಮಂತ್ರಿ ಕ್ರಮ ಕೈಗೊಳ್ಳದಿದ್ದರೆ ನಾವೇ ಪ್ರಕರಣ ದಾಖಲಿಸಿ, ಬಂಧಿಸುವಂತೆ ಆಗ್ರಹಿಸುತ್ತೇವೆ. ರಾಮ ಮಂದಿರ, ಗೋಹತ್ಯೆ ನಿಷೇಧ ಆಯ್ತು, ಈಗ ಹಿಜಾಬ್ ಶುರುವಾಗಿದೆ. ಈ ವಿಚಾರದಲ್ಲಿ ಬಿ.ಎಸ್. ಯಡಿಯೂರಪ್ಪ ಮಧ್ಯೆ ಪ್ರವೇಶ ಮಾಡಬೇಕು’ ಎಂದು ಆಗ್ರಹಿಸಿದರು.