‘ಹಿಜಾಬ್ ನಿಷೇಧ ಎಂದರೆ ಅದನ್ನು ಧರಿಸಿ ಎಲ್ಲಿಯೂ ಓಡಾಡುವಂತಿಲ್ಲ. ಹಿಜಾಬ್ ಯಾವಾಗ ನಿಷೇಧವಾಗಿದೆ? ಸಿದ್ದರಾಮಯ್ಯ ಮೂರ್ಖರ ರೀತಿ ಮಾತನಾಡಿದ್ದಾರೆ. ಸಮುದಾಯಗಳ ನಡುವೆ ಜಗಳ ಹಚ್ಚಿ, ತುಷ್ಟೀಕರಣ ಮಾಡಿ ಮುಸ್ಲಿಮರ ಮತಗಳನ್ನು ಪಡೆಯುವ ಹುನ್ನಾರ ಇದರ ಹಿಂದೆ ಇದೆ. ಈ ಷಡ್ಯಂತ್ರಕ್ಕೆ ಮುಸ್ಲಿಮರು ಬಲಿಯಾಗಬಾರದು’ ಎಂದು ಹೇಳಿದರು.