‘ಮಹದಾಯಿ ಯೋಜನೆ ಜಾರಿಗೆ ಸರ್ಕಾರ ₹1,600 ಕೋಟಿ ಮೀಸಲಿರಿಸಿದ್ದರೂ, ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭಿಸದೆ ಇರುವುದು ಈ ಭಾಗದ ಜನರಿಗೆ ಮಾಡಿದ ಅನ್ಯಾಯವಾಗಿದೆ. ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ಕೆಲವು ಬ್ಯಾಂಕ್ನ ಸಿಬ್ಬಂದಿ ರೈತರಿಗೆ ತಪ್ಪು ಮಾಹಿತಿ ನೀಡುತ್ತಿದ್ದು, ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಕೃಷ್ಣಾ ನದಿ ನೀರಿನ ಬಳಸಿಕೊಳ್ಳಲು ಸರ್ಕಾರ ಯೋಜನೆ ರೂಪಿಸಬೇಕು. ನಂಜುಂಡಪ್ಪ ವರದಿಯಂತೆ 9 ಇಲಾಖೆಗಳ ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಬೇಕು’ ಎಂದು ಒತ್ತಾಯಿಸಿದರು.