<p><strong>ಧಾರವಾಡ</strong>: ‘ಹಿಂದೂ ಎಂಬುವುದು ಜಾತಿ, ಮತ, ಪಂಥವಲ್ಲ, ಅದೊಂದು ಜೀವನದ ಪದ್ಧತಿ. ಇದು ಪ್ರತಿಯೊಬ್ಬರ ಮಸ್ತಕದಲ್ಲಿ ಬಂದಾಗ ಹಿಂದೂ ಧರ್ಮದ ಉಳಿವು ಸಾಧ್ಯ’ ಎಂದು ಭಾರತೀಯ ಶಿಕ್ಷಣ ಮಂಡಳದ ಅಖಿಲ ಭಾರತೀಯ ಸಂಘಟನಾ ಮಂತ್ರಿ ಶಂಕರಾನಂದ ಹೇಳಿದರು.</p>.<p>ಕಮಲಾಪೂರ-ಮಾಳಾಪುರ ಉಪನಗರ ಹಿಂದೂ ಸಮ್ಮೇಳನ ಸಮಿತಿಯು ನಗರದ ಕಮಲಾಪೂರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ನಡೆದ ಹಿಂದೂ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿಂದೂ ಭಾರತದ ಪ್ರಾಣ. ಹಿಂದೂ ಧರ್ಮ ಜನಿವಾರ, ಉಡದಾರವಲ್ಲ ಅದೊಂದು ಮನಸ್ಸುಗಳನ್ನು ಜೋಡಿಸುವ ಸೇತುವೆ. ಒಬ್ಬ ವ್ಯಕ್ತಿ ಮಹಾನ್ ಮಾನವನಾಗುವ ಜೊತೆಗೆ ಮಾಧವನಾಗುವುದೇ ಹಿಂದೂ ಧರ್ಮದ ಮೂಲ ಧ್ಯೇಯವಾಗಿದೆ’ ಎಂದು ತಿಳಿಸಿದರು.</p>.<p>‘ಪ್ರತಿ ಮನೆ, ಮನ ಹಾಗೂ ಸಮಾಜ ಹಿಂದುತ್ವ ಉಸಿರಾಡಬೇಕು. ಆಚಾರ-ವಿಚಾರ, ಆಹಾರ-ವಿಹಾರ, ಉಡುಗೆ-ತೊಡುಗೆಯಲ್ಲಿ ದೇಶಿಯತೆ ಪ್ರಜ್ವಲಿಸಬೇಕು. ನಾಡಿನ ಹಿಂದೂಗಳು ಒಗ್ಗೂಡಿ ಬಾಳಬೇಕು’ ಎಂದರು.</p>.<p>ನಯಾಗರದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಸಮ್ಮೇಳನ ಸಮಿತಿಯ ಕಾರ್ಯದರ್ಶಿ ಮಂಜುನಾಥ ಮಕ್ಕಳಗೇರಿ ಇದ್ದರು.</p>.<p>ಸಮ್ಮೇಳನದ ಅಂಗವಾಗಿ ಗಣಪತಿ ದೇವಸ್ಥಾನದಿಂದ ಪ್ರಾರಂಭವಾದ ಶೋಭಾಯಾತ್ರೆಗೆ ಜೋಡೆತ್ತಿನ ಮೆರವಣಿಗೆ, ಮಹಿಳೆಯರ ಪೂರ್ಣಕುಂಭ, ಮೈಸೂರು ಬೊಂಬೆ ಕುಣಿತ, ಝಾಂಜ್ ಮೇಳ, ಕೌಂಸಾಳಿ, ವೀರಪುರುಷರ ಪುಟಾಣಿಗಳ ಛೇದ್ಮವೇಷ ಮೆರಗು ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಹಿಂದೂ ಎಂಬುವುದು ಜಾತಿ, ಮತ, ಪಂಥವಲ್ಲ, ಅದೊಂದು ಜೀವನದ ಪದ್ಧತಿ. ಇದು ಪ್ರತಿಯೊಬ್ಬರ ಮಸ್ತಕದಲ್ಲಿ ಬಂದಾಗ ಹಿಂದೂ ಧರ್ಮದ ಉಳಿವು ಸಾಧ್ಯ’ ಎಂದು ಭಾರತೀಯ ಶಿಕ್ಷಣ ಮಂಡಳದ ಅಖಿಲ ಭಾರತೀಯ ಸಂಘಟನಾ ಮಂತ್ರಿ ಶಂಕರಾನಂದ ಹೇಳಿದರು.</p>.<p>ಕಮಲಾಪೂರ-ಮಾಳಾಪುರ ಉಪನಗರ ಹಿಂದೂ ಸಮ್ಮೇಳನ ಸಮಿತಿಯು ನಗರದ ಕಮಲಾಪೂರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ನಡೆದ ಹಿಂದೂ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>‘ಹಿಂದೂ ಭಾರತದ ಪ್ರಾಣ. ಹಿಂದೂ ಧರ್ಮ ಜನಿವಾರ, ಉಡದಾರವಲ್ಲ ಅದೊಂದು ಮನಸ್ಸುಗಳನ್ನು ಜೋಡಿಸುವ ಸೇತುವೆ. ಒಬ್ಬ ವ್ಯಕ್ತಿ ಮಹಾನ್ ಮಾನವನಾಗುವ ಜೊತೆಗೆ ಮಾಧವನಾಗುವುದೇ ಹಿಂದೂ ಧರ್ಮದ ಮೂಲ ಧ್ಯೇಯವಾಗಿದೆ’ ಎಂದು ತಿಳಿಸಿದರು.</p>.<p>‘ಪ್ರತಿ ಮನೆ, ಮನ ಹಾಗೂ ಸಮಾಜ ಹಿಂದುತ್ವ ಉಸಿರಾಡಬೇಕು. ಆಚಾರ-ವಿಚಾರ, ಆಹಾರ-ವಿಹಾರ, ಉಡುಗೆ-ತೊಡುಗೆಯಲ್ಲಿ ದೇಶಿಯತೆ ಪ್ರಜ್ವಲಿಸಬೇಕು. ನಾಡಿನ ಹಿಂದೂಗಳು ಒಗ್ಗೂಡಿ ಬಾಳಬೇಕು’ ಎಂದರು.</p>.<p>ನಯಾಗರದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಸಮ್ಮೇಳನ ಸಮಿತಿಯ ಕಾರ್ಯದರ್ಶಿ ಮಂಜುನಾಥ ಮಕ್ಕಳಗೇರಿ ಇದ್ದರು.</p>.<p>ಸಮ್ಮೇಳನದ ಅಂಗವಾಗಿ ಗಣಪತಿ ದೇವಸ್ಥಾನದಿಂದ ಪ್ರಾರಂಭವಾದ ಶೋಭಾಯಾತ್ರೆಗೆ ಜೋಡೆತ್ತಿನ ಮೆರವಣಿಗೆ, ಮಹಿಳೆಯರ ಪೂರ್ಣಕುಂಭ, ಮೈಸೂರು ಬೊಂಬೆ ಕುಣಿತ, ಝಾಂಜ್ ಮೇಳ, ಕೌಂಸಾಳಿ, ವೀರಪುರುಷರ ಪುಟಾಣಿಗಳ ಛೇದ್ಮವೇಷ ಮೆರಗು ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>