<p><strong>ಹುಬ್ಬಳ್ಳಿ</strong>: ‘ದೇಶದಲ್ಲಿ ಎಲ್ಲಿಯೂ ಹಿಂದೂಗಳಿಗೆ ರಕ್ಷಣೆ ಇಲ್ಲವಾಗಿದೆ. ದಲಿತ ಸಮುದಾಯದವರನ್ನು ಕೊಚ್ಚಿ ಕೊಲೆ ಮಾಡಲಾಗುತ್ತದೆ. ಅವರು ಹಿಂದೂಗಳಲ್ಲವೇ’ ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರೆ ಅದು ಜಾತಿ ಗಣತಿ, ಪ್ರಧಾನಿ ನರೇಂದ್ರ ಮೋದಿ ನಡೆಸಿದೆ ಯಾವ ಗಣತಿ? ರಾಜಕೀಯಕ್ಕಾಗಿ ಬಿಜೆಪಿಯವರು ಅರ್ಥವಿಲ್ಲದ ಹೇಳಿಕೆ ನೀಡುತ್ತ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜಾತಿ, ಧರ್ಮವನ್ನು ಮುಂದಿಟ್ಟುಕೊಂಡು ಮಾತನಾಡುತ್ತಾರೆ. ದೇಶದ ವಿವಿಧ ರಾಜ್ಯಗಳಲ್ಲಿ ದಲಿತ ಸಮುದಾಯದವರನ್ನು ಕೊಲೆ ಮಾಡಲಾಗುತ್ತಿದೆ, ಅವರಿಗೆ ರಕ್ಷಣೆಯೇ ಇಲ್ಲವಾಗಿದೆ. ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಆರೋಪಿಸಿದರು.</p>.<p>‘ರಾಜಕೀಯವಾಗಿ ಯಾರ್ಯಾರು ಹಿಂದುಳಿದ್ದಾರೆ, ಅವರ ಆರ್ಥಿಕ ಸ್ಥಿತಿಗತಿಗಳೇನು ಎನ್ನುವ ಕುರಿತು ರಾಜ್ಯದಲ್ಲಿ ಜಾತಿ ಗಣತಿ ನಡೆಯುತ್ತಿದೆ. ಹಿಂದುಳಿದ ವರ್ಗಗಳಿಗೆ ಸರ್ಕಾರ ಸಹಾಯ ಮಾಡಲಿದೆ. ವರದಿ ಬಂದ ತಕ್ಷಣ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು’ ಎಂದು ತಿಳಿಸಿದರು.</p>.<p>‘ಪಾಕಿಸ್ತಾನ ವಿರುದ್ಧ ಯುದ್ಧಕ್ಕೆ ಹೋಗುತ್ತೇನೆ’ ಎನ್ನುವ ಸಚಿವ ಜಮೀರ್ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ ಜಮೀರ್ ದೇಶ ಭಕ್ತರಾಗಿದ್ದು, ಯುದ್ಧಕ್ಕೆ ಹೋಗಿ ಬಾಂಬ್ ಹಾಕುವುದಿದ್ದರೆ ಹಾಕಲಿ. ದೇಶದ ಭದ್ರತೆಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಬೆಂಬಲಿಸುತ್ತೇವೆ’ ಎಂದರು.</p>.<p>‘ಜನಾರ್ಧನ ರೆಡ್ಡಿ ಯಾವೆಲ್ಲ ಅಕ್ರಮ ನಡೆಸಿದ್ದರೋ ಅವರಿಗೇ ಗೊತ್ತು. ಆದರೆ, ಸಾಕ್ಷ್ಯಾಧಾರದ ಮೇಲೆ ಕೋರ್ಟ್ ಅವರಿಗೆ ಶಿಕ್ಷೆ ವಿಧಿಸಿದೆ. ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ದೇಶದಲ್ಲಿ ಎಲ್ಲಿಯೂ ಹಿಂದೂಗಳಿಗೆ ರಕ್ಷಣೆ ಇಲ್ಲವಾಗಿದೆ. ದಲಿತ ಸಮುದಾಯದವರನ್ನು ಕೊಚ್ಚಿ ಕೊಲೆ ಮಾಡಲಾಗುತ್ತದೆ. ಅವರು ಹಿಂದೂಗಳಲ್ಲವೇ’ ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರೆ ಅದು ಜಾತಿ ಗಣತಿ, ಪ್ರಧಾನಿ ನರೇಂದ್ರ ಮೋದಿ ನಡೆಸಿದೆ ಯಾವ ಗಣತಿ? ರಾಜಕೀಯಕ್ಕಾಗಿ ಬಿಜೆಪಿಯವರು ಅರ್ಥವಿಲ್ಲದ ಹೇಳಿಕೆ ನೀಡುತ್ತ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಜಾತಿ, ಧರ್ಮವನ್ನು ಮುಂದಿಟ್ಟುಕೊಂಡು ಮಾತನಾಡುತ್ತಾರೆ. ದೇಶದ ವಿವಿಧ ರಾಜ್ಯಗಳಲ್ಲಿ ದಲಿತ ಸಮುದಾಯದವರನ್ನು ಕೊಲೆ ಮಾಡಲಾಗುತ್ತಿದೆ, ಅವರಿಗೆ ರಕ್ಷಣೆಯೇ ಇಲ್ಲವಾಗಿದೆ. ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಆರೋಪಿಸಿದರು.</p>.<p>‘ರಾಜಕೀಯವಾಗಿ ಯಾರ್ಯಾರು ಹಿಂದುಳಿದ್ದಾರೆ, ಅವರ ಆರ್ಥಿಕ ಸ್ಥಿತಿಗತಿಗಳೇನು ಎನ್ನುವ ಕುರಿತು ರಾಜ್ಯದಲ್ಲಿ ಜಾತಿ ಗಣತಿ ನಡೆಯುತ್ತಿದೆ. ಹಿಂದುಳಿದ ವರ್ಗಗಳಿಗೆ ಸರ್ಕಾರ ಸಹಾಯ ಮಾಡಲಿದೆ. ವರದಿ ಬಂದ ತಕ್ಷಣ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು’ ಎಂದು ತಿಳಿಸಿದರು.</p>.<p>‘ಪಾಕಿಸ್ತಾನ ವಿರುದ್ಧ ಯುದ್ಧಕ್ಕೆ ಹೋಗುತ್ತೇನೆ’ ಎನ್ನುವ ಸಚಿವ ಜಮೀರ್ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ ಜಮೀರ್ ದೇಶ ಭಕ್ತರಾಗಿದ್ದು, ಯುದ್ಧಕ್ಕೆ ಹೋಗಿ ಬಾಂಬ್ ಹಾಕುವುದಿದ್ದರೆ ಹಾಕಲಿ. ದೇಶದ ಭದ್ರತೆಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಬೆಂಬಲಿಸುತ್ತೇವೆ’ ಎಂದರು.</p>.<p>‘ಜನಾರ್ಧನ ರೆಡ್ಡಿ ಯಾವೆಲ್ಲ ಅಕ್ರಮ ನಡೆಸಿದ್ದರೋ ಅವರಿಗೇ ಗೊತ್ತು. ಆದರೆ, ಸಾಕ್ಷ್ಯಾಧಾರದ ಮೇಲೆ ಕೋರ್ಟ್ ಅವರಿಗೆ ಶಿಕ್ಷೆ ವಿಧಿಸಿದೆ. ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>