ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿವೃತ್ತ ಪ್ರಭಾರ ನಿರ್ದೇಶಕ ಚಂದ್ರಶೇಖರ ಜಿ. ಹಿರೇಮಠ ಹಾಗೂ ಆಡಳಿತಾಧಿಕಾರಿ ನಾರಾಯಣಸ್ವಾಮಿ ಅವರೇ ಈ ಪ್ರಕರಣದ ರೂವಾರಿಗಳು. ಪರೀಕ್ಷೆ ಬರೆದ ಬಳಿಕ ಅಭ್ಯರ್ಥಿಗಳ ಅಂಕಗಳನ್ನು ತಿದ್ದಿದ್ದಾರೆ. ಉತ್ತರ ಪತ್ರಿಕೆಯಲ್ಲಿ ಖಾಲಿ ಬಿಟ್ಟ ಸ್ಥಳದಲ್ಲಿ ಉತ್ತರ ಬರೆಸಿ ಹೆಚ್ಚುವರಿ ಅಂಕಗಳನ್ನು ಹಾಕಿಸಿದ್ದಾರೆ. ಇದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ’ ಎಂದರು.