<p><strong>ಹುಬ್ಬಳ್ಳಿ:</strong> ‘ಇತಿಹಾಸ ಎಂದರೆ ಸಾಮಾನ್ಯವಾಗಿ ನಡೆದು ಹೋದ ಘಟನೆಗಳು ಎನ್ನುತ್ತೇವೆ. ಆದರೆ, ಆ ಘಟನಾವಳಿಗಳು ಕಲಿಕೆಗೆ ಪೂರಕವಾಗಿರಬೇಕು’ ಎಂದು ಕರ್ನಾಟಕ ಶಿಕ್ಷಣ ಸೇವಾ ಸಮಿತಿಯ (ಕೆಎಸ್ಎಸ್ಎಸ್) ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಕಾರ್ಯದರ್ಶಿ ಸತ್ಯಮೂರ್ತಿ ಆಚಾರ್ಯ ತಿಳಿಸಿದರು.</p>.<p>ಇಲ್ಲಿನ ಬುಡರಸಿಂಗಿಯಲ್ಲಿರುವ ಕೆಎಸ್ಎಸ್ಎಸ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜಂಟಿ ಕಾರ್ಯದರ್ಶಿ ಗೋಪಾಲ ಕುಲಕರ್ಣಿ, ‘ನಮ್ಮ ಸಂಸ್ಥೆಯಲ್ಲಿ ಗುಣಮಟ್ಟದ ಆಹಾರ, ಒಳ್ಳೆಯ ಶಿಕ್ಷಣ ಹಾಗೂ ನುರಿತ ಶಿಕ್ಷಕರು ಇರುವುದರಿಂದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಅತಿಥಿ ಶಾಕೀರ್ ಸನದಿ, ‘ಜಗತ್ತು ವೇಗವಾಗಿ ನಡೆಯುತ್ತಿದೆ, ಅದರ ಜೊತೆಗೆ ನಾವು ನಡೆಯಬೇಕಿದೆ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಖಜಾಂಚಿ ಎ.ಪಿ. ಐತಾಳ್, ಪ್ರಾಚಾರ್ಯ ಮಹೇಂದ್ರ ಜಿ.ಎ., ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಶ್ರೀಕಾಂತ ಕೆಮ್ತೂರ್ ಮಾತನಾಡಿದರು. ಶ್ರೀಪತಿ ಐತಾಳ್, ಕೃಷ್ಣರಾಜ ಕೆಮ್ತೂರ್ ಇದ್ದರು.</p>.<p>ದ್ವಿತೀಯ ಪಿ.ಯು.ಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಇತಿಹಾಸ ಎಂದರೆ ಸಾಮಾನ್ಯವಾಗಿ ನಡೆದು ಹೋದ ಘಟನೆಗಳು ಎನ್ನುತ್ತೇವೆ. ಆದರೆ, ಆ ಘಟನಾವಳಿಗಳು ಕಲಿಕೆಗೆ ಪೂರಕವಾಗಿರಬೇಕು’ ಎಂದು ಕರ್ನಾಟಕ ಶಿಕ್ಷಣ ಸೇವಾ ಸಮಿತಿಯ (ಕೆಎಸ್ಎಸ್ಎಸ್) ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಕಾರ್ಯದರ್ಶಿ ಸತ್ಯಮೂರ್ತಿ ಆಚಾರ್ಯ ತಿಳಿಸಿದರು.</p>.<p>ಇಲ್ಲಿನ ಬುಡರಸಿಂಗಿಯಲ್ಲಿರುವ ಕೆಎಸ್ಎಸ್ಎಸ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜಂಟಿ ಕಾರ್ಯದರ್ಶಿ ಗೋಪಾಲ ಕುಲಕರ್ಣಿ, ‘ನಮ್ಮ ಸಂಸ್ಥೆಯಲ್ಲಿ ಗುಣಮಟ್ಟದ ಆಹಾರ, ಒಳ್ಳೆಯ ಶಿಕ್ಷಣ ಹಾಗೂ ನುರಿತ ಶಿಕ್ಷಕರು ಇರುವುದರಿಂದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಅತಿಥಿ ಶಾಕೀರ್ ಸನದಿ, ‘ಜಗತ್ತು ವೇಗವಾಗಿ ನಡೆಯುತ್ತಿದೆ, ಅದರ ಜೊತೆಗೆ ನಾವು ನಡೆಯಬೇಕಿದೆ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಖಜಾಂಚಿ ಎ.ಪಿ. ಐತಾಳ್, ಪ್ರಾಚಾರ್ಯ ಮಹೇಂದ್ರ ಜಿ.ಎ., ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಶ್ರೀಕಾಂತ ಕೆಮ್ತೂರ್ ಮಾತನಾಡಿದರು. ಶ್ರೀಪತಿ ಐತಾಳ್, ಕೃಷ್ಣರಾಜ ಕೆಮ್ತೂರ್ ಇದ್ದರು.</p>.<p>ದ್ವಿತೀಯ ಪಿ.ಯು.ಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>