<p><strong>ಧಾರವಾಡ</strong>: ‘ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ಸಂಬಂಧಿಸಿದಂತೆ ನಾವು ಮಾತನಾಡದಂತೆ ಪಕ್ಷ ನಿರ್ಬಂಧ ವಿಧಿಸಿದೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯಿಸಿದರು. </p><p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಚಿವ ಸಂಪುಟ ವಿಸ್ತರಣೆ ಅಥವಾ ಬದಲಾವಣೆ ಮಾಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು. ಆ ನಿಟ್ಟಿನಲ್ಲಿ ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನಿಸುವ ಪದ್ಧತಿ ಪಕ್ಷದಲ್ಲಿದೆ. ಹಳಬರನ್ನು ಕೈಬಿಡುವ ಮತ್ತು ಹೊಸಬರಿಗೆ ಅವಕಾಶ ನೀಡುವ ಕುರಿತು ಮುಖ್ಯಮಂತ್ರಿಯವರೇ ಉತ್ತರ ನೀಡಬೇಕು’ ಎಂದರು. </p><p>‘ಅಭಿವೃದ್ಧಿ ಕೆಲಸದ ಬಗ್ಗೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ. ಸಣ್ಣ ವಿಷಯಗಳನ್ನೇ ಪದೇಪದೇ ಹೇಳುವುದು, ‘ಹಿಟ್ ಅಂಡ್ ರನ್’ನಂಥ ಆರೋಪ ಮಾಡುವುದರಲ್ಲಿ ಬಿಜೆಪಿಯವರು ತೊಡಗಿದ್ದಾರೆ’ ಎಂದು ದೂರಿದರು. </p><p>‘ಆಡಳಿತ ಪಕ್ಷದ ತಪ್ಪುಗಳನ್ನು ತೋರಿಸುವ, ಅಭಿವೃದ್ಧಿ ಕೆಲಸಕ್ಕೆ ಚ್ಯುತಿಯಾಗಿದ್ದರೆ ಟೀಕಿಸುವ ಕೆಲಸವನ್ನು ಬಿಜೆಪಿಯವರು ಮಾಡಬೇಕು. ಆದರೆ, ಅವರು ಸದನದೊಳಗೂ, ಹೊರಗೂ ಅದನ್ನು ಅವರು ಮಾಡಲ್ಲ. ರಚನಾತ್ಮಕ ವಿರೋಧ ಪಕ್ಷಗಳಾಗಿ ಬಿಜೆಪಿ, ಜೆಡಿಎಸ್ ಕೆಲಸ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ಸಂಬಂಧಿಸಿದಂತೆ ನಾವು ಮಾತನಾಡದಂತೆ ಪಕ್ಷ ನಿರ್ಬಂಧ ವಿಧಿಸಿದೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯಿಸಿದರು. </p><p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಚಿವ ಸಂಪುಟ ವಿಸ್ತರಣೆ ಅಥವಾ ಬದಲಾವಣೆ ಮಾಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು. ಆ ನಿಟ್ಟಿನಲ್ಲಿ ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನಿಸುವ ಪದ್ಧತಿ ಪಕ್ಷದಲ್ಲಿದೆ. ಹಳಬರನ್ನು ಕೈಬಿಡುವ ಮತ್ತು ಹೊಸಬರಿಗೆ ಅವಕಾಶ ನೀಡುವ ಕುರಿತು ಮುಖ್ಯಮಂತ್ರಿಯವರೇ ಉತ್ತರ ನೀಡಬೇಕು’ ಎಂದರು. </p><p>‘ಅಭಿವೃದ್ಧಿ ಕೆಲಸದ ಬಗ್ಗೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ. ಸಣ್ಣ ವಿಷಯಗಳನ್ನೇ ಪದೇಪದೇ ಹೇಳುವುದು, ‘ಹಿಟ್ ಅಂಡ್ ರನ್’ನಂಥ ಆರೋಪ ಮಾಡುವುದರಲ್ಲಿ ಬಿಜೆಪಿಯವರು ತೊಡಗಿದ್ದಾರೆ’ ಎಂದು ದೂರಿದರು. </p><p>‘ಆಡಳಿತ ಪಕ್ಷದ ತಪ್ಪುಗಳನ್ನು ತೋರಿಸುವ, ಅಭಿವೃದ್ಧಿ ಕೆಲಸಕ್ಕೆ ಚ್ಯುತಿಯಾಗಿದ್ದರೆ ಟೀಕಿಸುವ ಕೆಲಸವನ್ನು ಬಿಜೆಪಿಯವರು ಮಾಡಬೇಕು. ಆದರೆ, ಅವರು ಸದನದೊಳಗೂ, ಹೊರಗೂ ಅದನ್ನು ಅವರು ಮಾಡಲ್ಲ. ರಚನಾತ್ಮಕ ವಿರೋಧ ಪಕ್ಷಗಳಾಗಿ ಬಿಜೆಪಿ, ಜೆಡಿಎಸ್ ಕೆಲಸ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>