<p><strong>ಹುಬ್ಬಳ್ಳಿ:</strong> ‘ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ(ಸ್ಲಂ ಬೋರ್ಡ್)ಯಿಂದ ನಿರ್ಮಿಸಿರುವ 42,346 ಮನೆಗಳನ್ನು ನ.29ರಂದು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ ಹಂಚಿಕೆ ಮಾಡಲಾಗುವುದು’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.</p>.<p>ನಗರದ ಹೊರಭಾಗದ ಮಂಟೂರು ರಸ್ತೆ ಬಳಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ನಿರ್ಮಾಣ ಹಂತದ ಮನೆಗಳು ಹಾಗೂ ಕಾರ್ಯಕ್ರಮ ಆಯೋಜಿಸುವ ಸ್ಥಳ ಭಾನುವಾರ ಪರಿಶೀಲಿಸಿ, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಮನೆಗಳ ಹಂಚಿಕೆ ಕಾರ್ಯಕ್ರಮ ಆಯೋಜನೆಗೆ 18 ಎಕರೆಯಷ್ಟು ವಿಶಾಲವಾದ ಜಾಗ ಗುರುತಿಸಿದ್ದು, ಸುಮಾರು 2 ಲಕ್ಷ ಆಸನಗಳ ವ್ಯವಸ್ಥೆ ಮಾಡಲು ಅನುಕೂಲವಾಗಿದೆ’ ಎಂದರು.</p>.<p>‘2013ರಿಂದ 18ರವರೆಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ಲಂ ಬೋರ್ಡ್ನಿಂದ 1,80,253 ಮನೆಗಳು ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆಯಡಿ 47,863 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿತ್ತು. ಒಟ್ಟು 2 ಲಕ್ಷ 33 ಸಾವಿರ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಬಿಜೆಪಿ, ಜೆಡಿಎಸ್ ನೇತೃತ್ವದ ಸರ್ಕಾರ ಒಂದೇ ಒಂದು ಮನೆ ನಿರ್ಮಾಣ ಮಾಡಲಿಲ್ಲ. ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಈ ಯೋಜನೆ ಕೈಗೆತ್ತಿಕೊಂಡು, ಕಳೆದ ವರ್ಷ 36,789 ಮನೆಗಳನ್ನು ಹಂಚಿಕೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ಒಂದು ಮನೆ ನಿರ್ಮಾಣಕ್ಕೆ ₹7.50 ಲಕ್ಷ ಬೇಕಾಗುತ್ತದೆ. ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ₹1.50 ಲಕ್ಷ ನೀಡಿ ಶೇ 18ರಷ್ಟು ಜಿಎಸ್ಟಿ ಹಾಕಿ ಬಡವರಿಂದ ₹1.38 ಲಕ್ಷ ಹಣವನ್ನು ವಾಪಸ್ ಪಡೆಯುತ್ತಿದೆ. ರಾಜ್ಯ ಸರ್ಕಾರದಿಂದ ಸಾಮಾನ್ಯರಿಗೆ ₹1.50 ಲಕ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ₹2 ಲಕ್ಷ ನೀಡಲಾಗುತ್ತದೆ. ಹಾಗೆಯೇ ₹4 ಲಕ್ಷ ಹಣವನ್ನು ಫಲಾನುಭವಿಗಳಿಂದ ಪಡೆಯಬೇಕಿತ್ತು. ಬಡವರಿಗೆ ಇಷ್ಟು ಹಣ ನೀಡಲು ಸಾಧ್ಯವಿಲ್ಲ. 2 ಲಕ್ಷ 30 ಸಾವಿರ ಮನೆಗಳಿಗೆ ₹9,500 ಕೋಟಿ ಸಂಗ್ರಹ ಆಗಬೇಕಿತ್ತು. ಆದರೆ, ಕೇವಲ ಫಲಾನುಭವಿಗಳಿಂದ ₹310 ಕೋಟಿ ಮಾತ್ರ ಪಾವತಿಸಿಕೊಳ್ಳಲಾಗಿದೆ. ಬಡವರ ಕಾಳಜಿವಹಿಸಿ ಫಲಾನುಭವಿಗಳ ವಂತಿಕೆಯನ್ನೂ ರಾಜ್ಯ ಸರ್ಕಾರವೇ ಭರಿಸುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿದ್ದಾರೆ’ ಎಂದು ಹೇಳಿದರು.</p>.<p>‘2024ರ ಫೆಬ್ರುವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಹಂತವಾಗಿ ₹500 ಕೋಟಿ ಬಿಡುಗಡೆಗೊಳಿಸಿದ್ದರಿಂದ, ಕಳೆದ ವರ್ಷ 36,789 ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಲಾಯಿತು’ ಎಂದು ತಿಳಿಸಿದರು.</p>.<div><blockquote>ಬಡವರ ಮನೆಗಳ ಮೇಲೆ ಜಿಎಸ್ಟಿ ಹಾಕಬೇಡಿ ಎಂದು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ. ಅವರಿಗೆ ಬಡವರ ಬಗ್ಗೆ ಕಾಳಜಿಯೇ ಇಲ್ಲ</blockquote><span class="attribution">ಜಮೀರ್ ಅಹ್ಮದ್ ಖಾನ್ ವಸತಿ ಸಚಿವ</span></div>.<p><strong>‘ಆರೋಪ ಮಾಡುವುದೊಂದೇ ಬಿಜೆಪಿಗರ ಕೆಲಸ’</strong></p><p>‘ರಾಜ್ಯದ ಒಬ್ಬ ಬಡವನಿಗಾದರೂ ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದರೆ ರಾಜ್ಯಪಾಲರ ಬಳಿ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರಿಗೆ ನೇರವಾಗಿ ಸವಾಲು ಹಾಕಿದ್ದೇನೆ. ಹೇಳಿಕೆ ನೀಡಿ ಒಂದು ವಾರ ಕಳೆದರೂ ಈ ಬಗ್ಗೆ ಬಿಜೆಪಿಯ ಯಾರೊಬ್ಬರೂ ಮಾತನಾಡಿಲ್ಲ. ಬಿಜೆಪಿ ನಾಯಕರಿಗೆ ಆರೋಪ ಮಾಡುವುದೊಂದೇ ಕೆಲಸ ’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ(ಸ್ಲಂ ಬೋರ್ಡ್)ಯಿಂದ ನಿರ್ಮಿಸಿರುವ 42,346 ಮನೆಗಳನ್ನು ನ.29ರಂದು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ ಹಂಚಿಕೆ ಮಾಡಲಾಗುವುದು’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.</p>.<p>ನಗರದ ಹೊರಭಾಗದ ಮಂಟೂರು ರಸ್ತೆ ಬಳಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ನಿರ್ಮಾಣ ಹಂತದ ಮನೆಗಳು ಹಾಗೂ ಕಾರ್ಯಕ್ರಮ ಆಯೋಜಿಸುವ ಸ್ಥಳ ಭಾನುವಾರ ಪರಿಶೀಲಿಸಿ, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಮನೆಗಳ ಹಂಚಿಕೆ ಕಾರ್ಯಕ್ರಮ ಆಯೋಜನೆಗೆ 18 ಎಕರೆಯಷ್ಟು ವಿಶಾಲವಾದ ಜಾಗ ಗುರುತಿಸಿದ್ದು, ಸುಮಾರು 2 ಲಕ್ಷ ಆಸನಗಳ ವ್ಯವಸ್ಥೆ ಮಾಡಲು ಅನುಕೂಲವಾಗಿದೆ’ ಎಂದರು.</p>.<p>‘2013ರಿಂದ 18ರವರೆಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ಲಂ ಬೋರ್ಡ್ನಿಂದ 1,80,253 ಮನೆಗಳು ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆಯಡಿ 47,863 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿತ್ತು. ಒಟ್ಟು 2 ಲಕ್ಷ 33 ಸಾವಿರ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಬಿಜೆಪಿ, ಜೆಡಿಎಸ್ ನೇತೃತ್ವದ ಸರ್ಕಾರ ಒಂದೇ ಒಂದು ಮನೆ ನಿರ್ಮಾಣ ಮಾಡಲಿಲ್ಲ. ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಈ ಯೋಜನೆ ಕೈಗೆತ್ತಿಕೊಂಡು, ಕಳೆದ ವರ್ಷ 36,789 ಮನೆಗಳನ್ನು ಹಂಚಿಕೆ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ಒಂದು ಮನೆ ನಿರ್ಮಾಣಕ್ಕೆ ₹7.50 ಲಕ್ಷ ಬೇಕಾಗುತ್ತದೆ. ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ₹1.50 ಲಕ್ಷ ನೀಡಿ ಶೇ 18ರಷ್ಟು ಜಿಎಸ್ಟಿ ಹಾಕಿ ಬಡವರಿಂದ ₹1.38 ಲಕ್ಷ ಹಣವನ್ನು ವಾಪಸ್ ಪಡೆಯುತ್ತಿದೆ. ರಾಜ್ಯ ಸರ್ಕಾರದಿಂದ ಸಾಮಾನ್ಯರಿಗೆ ₹1.50 ಲಕ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ₹2 ಲಕ್ಷ ನೀಡಲಾಗುತ್ತದೆ. ಹಾಗೆಯೇ ₹4 ಲಕ್ಷ ಹಣವನ್ನು ಫಲಾನುಭವಿಗಳಿಂದ ಪಡೆಯಬೇಕಿತ್ತು. ಬಡವರಿಗೆ ಇಷ್ಟು ಹಣ ನೀಡಲು ಸಾಧ್ಯವಿಲ್ಲ. 2 ಲಕ್ಷ 30 ಸಾವಿರ ಮನೆಗಳಿಗೆ ₹9,500 ಕೋಟಿ ಸಂಗ್ರಹ ಆಗಬೇಕಿತ್ತು. ಆದರೆ, ಕೇವಲ ಫಲಾನುಭವಿಗಳಿಂದ ₹310 ಕೋಟಿ ಮಾತ್ರ ಪಾವತಿಸಿಕೊಳ್ಳಲಾಗಿದೆ. ಬಡವರ ಕಾಳಜಿವಹಿಸಿ ಫಲಾನುಭವಿಗಳ ವಂತಿಕೆಯನ್ನೂ ರಾಜ್ಯ ಸರ್ಕಾರವೇ ಭರಿಸುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿದ್ದಾರೆ’ ಎಂದು ಹೇಳಿದರು.</p>.<p>‘2024ರ ಫೆಬ್ರುವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಹಂತವಾಗಿ ₹500 ಕೋಟಿ ಬಿಡುಗಡೆಗೊಳಿಸಿದ್ದರಿಂದ, ಕಳೆದ ವರ್ಷ 36,789 ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಲಾಯಿತು’ ಎಂದು ತಿಳಿಸಿದರು.</p>.<div><blockquote>ಬಡವರ ಮನೆಗಳ ಮೇಲೆ ಜಿಎಸ್ಟಿ ಹಾಕಬೇಡಿ ಎಂದು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ. ಅವರಿಗೆ ಬಡವರ ಬಗ್ಗೆ ಕಾಳಜಿಯೇ ಇಲ್ಲ</blockquote><span class="attribution">ಜಮೀರ್ ಅಹ್ಮದ್ ಖಾನ್ ವಸತಿ ಸಚಿವ</span></div>.<p><strong>‘ಆರೋಪ ಮಾಡುವುದೊಂದೇ ಬಿಜೆಪಿಗರ ಕೆಲಸ’</strong></p><p>‘ರಾಜ್ಯದ ಒಬ್ಬ ಬಡವನಿಗಾದರೂ ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದರೆ ರಾಜ್ಯಪಾಲರ ಬಳಿ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರಿಗೆ ನೇರವಾಗಿ ಸವಾಲು ಹಾಕಿದ್ದೇನೆ. ಹೇಳಿಕೆ ನೀಡಿ ಒಂದು ವಾರ ಕಳೆದರೂ ಈ ಬಗ್ಗೆ ಬಿಜೆಪಿಯ ಯಾರೊಬ್ಬರೂ ಮಾತನಾಡಿಲ್ಲ. ಬಿಜೆಪಿ ನಾಯಕರಿಗೆ ಆರೋಪ ಮಾಡುವುದೊಂದೇ ಕೆಲಸ ’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>