ಆರೋಪಿತರು ಚಿನ್ನದ ವ್ಯಾಪಾರಿ ಗರ್ವಿತ ಅವರನ್ನು ಅಪಹರಿಸಿ ಬಿಡುಗಡೆಗೆ ಹಣಕ್ಕೆ ಬೇಡಿಕೆ ಇಡುವ ಚಿಂತನೆ ನಡೆಸಿದ್ದರು. ಅಪಹರಣಕಾರರಿಂದ ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್, ಸೇರಿದಂತೆ ಒಟ್ಟು ₹1,75 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ರಟ್ಟೀಹಳ್ಳಿ ಪೊಲೀಸರು ತಿಳಿಸಿದ್ದಾರೆ.