<p><strong>ರಟ್ಟೀಹಳ್ಳಿ</strong>: ಪಟ್ಟಣದ ಚಿನ್ನದ ವ್ಯಾಪಾರಿ ಗರ್ವಿತ ರಾಜಪುರೋಹಿತ ಅವರನ್ನು ಡಿ.10ರಂದು ರಾತ್ರಿ 8 ಗಂಟೆ ಸುಮಾರಿಗೆ ಪಟ್ಟಣದ ತರಳುಬಾಳು ನಗರ 1ನೇ ಕ್ರಾಸ್ ಬಳಿ ಐವರು ವ್ಯಕ್ತಿಗಳು ಕಾರಿನಲ್ಲಿ ಬಂದು ಅಡ್ಡಗಟ್ಟಿ ಅಪಹರಣಕ್ಕೆ ಪ್ರಯತ್ನಿಸಿ, ಪರಾರಿಯಾಗಿದ್ದಾರೆ. </p>.<p>ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರಿನಲ್ಲಿ ಶೋಬಿತ ಪಿ. ಮಂಜುನಾಥ, ಜೇಮ್ಸ್, ಪ್ರಸನ್ನ, ಇವರನ್ನು ದಸ್ತಗಿರಿ ಮಾಡಿದ್ದು, ಪ್ರಮುಖ ಆರೋಪಿ ರಟ್ಟೀಹಳ್ಳಿ ಪಟ್ಟಣದ ರಾಜು ಪವಾರ ಇತನನ್ನು ಹಾವೇರಿ ತಾಲ್ಲೂಕು ಅಗಡಿಯಲ್ಲಿ ದಸ್ತಗಿರಿ ಮಾಡಿದ್ಧಾರೆ. </p>.<p>ಆರೋಪಿತರು ಚಿನ್ನದ ವ್ಯಾಪಾರಿ ಗರ್ವಿತ ಅವರನ್ನು ಅಪಹರಿಸಿ ಬಿಡುಗಡೆಗೆ ಹಣಕ್ಕೆ ಬೇಡಿಕೆ ಇಡುವ ಚಿಂತನೆ ನಡೆಸಿದ್ದರು. ಅಪಹರಣಕಾರರಿಂದ ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್, ಸೇರಿದಂತೆ ಒಟ್ಟು ₹1,75 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ರಟ್ಟೀಹಳ್ಳಿ ಪೊಲೀಸರು ತಿಳಿಸಿದ್ದಾರೆ. </p>.<p>ಪ್ರಕರಣ ಬೇಧಿಸಿದ ತನಿಖಾ ತಂಡದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ</strong>: ಪಟ್ಟಣದ ಚಿನ್ನದ ವ್ಯಾಪಾರಿ ಗರ್ವಿತ ರಾಜಪುರೋಹಿತ ಅವರನ್ನು ಡಿ.10ರಂದು ರಾತ್ರಿ 8 ಗಂಟೆ ಸುಮಾರಿಗೆ ಪಟ್ಟಣದ ತರಳುಬಾಳು ನಗರ 1ನೇ ಕ್ರಾಸ್ ಬಳಿ ಐವರು ವ್ಯಕ್ತಿಗಳು ಕಾರಿನಲ್ಲಿ ಬಂದು ಅಡ್ಡಗಟ್ಟಿ ಅಪಹರಣಕ್ಕೆ ಪ್ರಯತ್ನಿಸಿ, ಪರಾರಿಯಾಗಿದ್ದಾರೆ. </p>.<p>ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರಿನಲ್ಲಿ ಶೋಬಿತ ಪಿ. ಮಂಜುನಾಥ, ಜೇಮ್ಸ್, ಪ್ರಸನ್ನ, ಇವರನ್ನು ದಸ್ತಗಿರಿ ಮಾಡಿದ್ದು, ಪ್ರಮುಖ ಆರೋಪಿ ರಟ್ಟೀಹಳ್ಳಿ ಪಟ್ಟಣದ ರಾಜು ಪವಾರ ಇತನನ್ನು ಹಾವೇರಿ ತಾಲ್ಲೂಕು ಅಗಡಿಯಲ್ಲಿ ದಸ್ತಗಿರಿ ಮಾಡಿದ್ಧಾರೆ. </p>.<p>ಆರೋಪಿತರು ಚಿನ್ನದ ವ್ಯಾಪಾರಿ ಗರ್ವಿತ ಅವರನ್ನು ಅಪಹರಿಸಿ ಬಿಡುಗಡೆಗೆ ಹಣಕ್ಕೆ ಬೇಡಿಕೆ ಇಡುವ ಚಿಂತನೆ ನಡೆಸಿದ್ದರು. ಅಪಹರಣಕಾರರಿಂದ ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್, ಸೇರಿದಂತೆ ಒಟ್ಟು ₹1,75 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ರಟ್ಟೀಹಳ್ಳಿ ಪೊಲೀಸರು ತಿಳಿಸಿದ್ದಾರೆ. </p>.<p>ಪ್ರಕರಣ ಬೇಧಿಸಿದ ತನಿಖಾ ತಂಡದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>