<p><strong>ಹುಬ್ಬಳ್ಳಿ:</strong> ಗುತ್ತಿಗೆದಾರ ಮೋಹನ ಚವ್ಹಾಣ್ ಅವರನ್ನು ಎಂಟು–ಹತ್ತು ಮಂದಿಯ ಗುಂಪು ಶನಿವಾರ ಮಧ್ಯಾಹ್ನ ತೋಳನಕೆರೆ ಬಳಿಯ ಅವರ ಕಚೇರಿಯಿಂದ ಕಾರಿನಲ್ಲಿ ಅಪಹರಿಸಿದೆ ಎಂಬ ಆರೋಪ ಕೇಳಿ ಬಂದಿದೆ.</p>.<p>ಕ್ರೂಸರ್ ಮತ್ತು ಕಾರಿನಲ್ಲಿ ಬಂದ ಅಪಹರಣಕಾರರು, ಮೋಹನ ಅವರ ಕಚೇರಿಯೊಳಗೆ ನುಗ್ಗಿ ಹೊರಗೆ ಎಳೆದುಕೊಂಡು ಬಂದಿದ್ದಾರೆ. ಚಲಿಸುತ್ತಿದ್ದ ಕಾರಿನಲ್ಲಿಯೇ ಬಲವಂತವಾಗಿ ಅವರನ್ನು ನೂಕಿ, ಕರೆದೊಯ್ದಿದ್ದಾರೆ. ತಡೆಯಲು ಹೋದವರ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೆ, ಮಹಿಳೆಯರನ್ನು ಸಹ ಎಳೆದಾಡಿರುವ ವಿಡಿಯೊ ಹರಿದಾಡುತ್ತಿದೆ.</p>.<p>ಈಶ್ವರನಗರದ ನಿವಾಸಿಯಾದ ಗುತ್ತಿಗೆದಾರ ಮೋಹನ ಅವರು, ತಾವು ಗುತ್ತಿಗೆ ಪಡೆದ ಕೆಲಸವನ್ನು ಉಪ ಗುತ್ತಿಗೆ ನೀಡುತ್ತಿದ್ದರು. ಕೆಲಸ ಮುಗಿದ ನಂತರ ಹಣ ಪಾವತಿಸದ ಕಾರಣ ಈ ಹಿಂದೆ, ಉಪಗುತ್ತಿಗೆದಾರ ಬಸಪ್ಪ ಎಂಬಾತ ಅವರನ್ನು ಅಪಹರಿಸಿದ್ದ ಎನ್ನಲಾಗಿದ್ದು, ಪ್ರಕರಣ ದಾಖಲಾಗಿರಲಿಲ್ಲ. ಇಂದು ಅಪಹರಿಸಿದವರು ₹1 ಕೋಟಿಗೆ ಬೇಡಿಕೆ ಇಟ್ಟಿದ್ದಾಗಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಧಾರವಾಡದ ಗರಗದಲ್ಲಿ ಕ್ರೂಸರ್ ವಾಹನ ಸಿಕ್ಕಿದ್ದು, ಅಪಹರಣಕ್ಕೆ ಬಳಸಿದ್ದ ಕಾರು ಪತ್ತೆಯಾಗಿಲ್ಲ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಗುತ್ತಿಗೆದಾರ ಮೋಹನ ಅವರನ್ನು ಅವರ ಪರಿಚಯದವರೇ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿಯಿದೆ. ತನಿಖೆ ಮುಂದುವರಿದಿದೆ’ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದ್ದಾರೆ. </p>.<p>ಅಪಹರಣಕ್ಕೊಳಗಾದ ಗುತ್ತಿಗೆದಾರ ಮೋಹನ ಅವರ ಕಚೇರಿಗೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪೊಲೀಸರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಗುತ್ತಿಗೆದಾರ ಮೋಹನ ಚವ್ಹಾಣ್ ಅವರನ್ನು ಎಂಟು–ಹತ್ತು ಮಂದಿಯ ಗುಂಪು ಶನಿವಾರ ಮಧ್ಯಾಹ್ನ ತೋಳನಕೆರೆ ಬಳಿಯ ಅವರ ಕಚೇರಿಯಿಂದ ಕಾರಿನಲ್ಲಿ ಅಪಹರಿಸಿದೆ ಎಂಬ ಆರೋಪ ಕೇಳಿ ಬಂದಿದೆ.</p>.<p>ಕ್ರೂಸರ್ ಮತ್ತು ಕಾರಿನಲ್ಲಿ ಬಂದ ಅಪಹರಣಕಾರರು, ಮೋಹನ ಅವರ ಕಚೇರಿಯೊಳಗೆ ನುಗ್ಗಿ ಹೊರಗೆ ಎಳೆದುಕೊಂಡು ಬಂದಿದ್ದಾರೆ. ಚಲಿಸುತ್ತಿದ್ದ ಕಾರಿನಲ್ಲಿಯೇ ಬಲವಂತವಾಗಿ ಅವರನ್ನು ನೂಕಿ, ಕರೆದೊಯ್ದಿದ್ದಾರೆ. ತಡೆಯಲು ಹೋದವರ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೆ, ಮಹಿಳೆಯರನ್ನು ಸಹ ಎಳೆದಾಡಿರುವ ವಿಡಿಯೊ ಹರಿದಾಡುತ್ತಿದೆ.</p>.<p>ಈಶ್ವರನಗರದ ನಿವಾಸಿಯಾದ ಗುತ್ತಿಗೆದಾರ ಮೋಹನ ಅವರು, ತಾವು ಗುತ್ತಿಗೆ ಪಡೆದ ಕೆಲಸವನ್ನು ಉಪ ಗುತ್ತಿಗೆ ನೀಡುತ್ತಿದ್ದರು. ಕೆಲಸ ಮುಗಿದ ನಂತರ ಹಣ ಪಾವತಿಸದ ಕಾರಣ ಈ ಹಿಂದೆ, ಉಪಗುತ್ತಿಗೆದಾರ ಬಸಪ್ಪ ಎಂಬಾತ ಅವರನ್ನು ಅಪಹರಿಸಿದ್ದ ಎನ್ನಲಾಗಿದ್ದು, ಪ್ರಕರಣ ದಾಖಲಾಗಿರಲಿಲ್ಲ. ಇಂದು ಅಪಹರಿಸಿದವರು ₹1 ಕೋಟಿಗೆ ಬೇಡಿಕೆ ಇಟ್ಟಿದ್ದಾಗಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಧಾರವಾಡದ ಗರಗದಲ್ಲಿ ಕ್ರೂಸರ್ ವಾಹನ ಸಿಕ್ಕಿದ್ದು, ಅಪಹರಣಕ್ಕೆ ಬಳಸಿದ್ದ ಕಾರು ಪತ್ತೆಯಾಗಿಲ್ಲ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಗುತ್ತಿಗೆದಾರ ಮೋಹನ ಅವರನ್ನು ಅವರ ಪರಿಚಯದವರೇ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿಯಿದೆ. ತನಿಖೆ ಮುಂದುವರಿದಿದೆ’ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದ್ದಾರೆ. </p>.<p>ಅಪಹರಣಕ್ಕೊಳಗಾದ ಗುತ್ತಿಗೆದಾರ ಮೋಹನ ಅವರ ಕಚೇರಿಗೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪೊಲೀಸರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>