<p>ಹುಬ್ಬಳ್ಳಿ: ಮದ್ಯದ ಅಮಲಿನಲ್ಲಿ ಪ್ರದೀಪ ಪೂಜಾರ ಎಂಬಾತ ತನ್ನ ಅಣ್ಣನೊಂದಿಗೆ ವಾಗ್ವಾದ ಮಾಡಿ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಪ್ರಕರಣ ಇಲ್ಲಿನ ಶಿವಶಂಕರ ಕಾಲೊನಿಯಲ್ಲಿ ಗುರುವಾರ ನಡೆದಿದೆ.</p>.<p>ಮಲ್ಲೇಶ ಪೂಜಾರ (42) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಪ್ರದೀಪ ಪೂಜಾರ ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು: ತಾಲ್ಲೂಕಿನ ಕಿರೆಸೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಗುರುವಾರ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p>.<p>ಬಾಗಲಕೋಟೆ ಜಿಲ್ಲೆಯ ಕೆಲೂರ ಗ್ರಾಮದ ಶರಿಸಾಬ್ ಸಿಮಿಕೇರಿ (36) ಮೃತ ಬೈಕ್ ಸವಾರ. ಬೈಕ್ನ ಹಿಂಬದಿ ಸವಾರ, ಅದೇ ಗ್ರಾಮದ ದುರುಗೇಶ ವಡ್ಡರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕ್ಷುಲ್ಲಕ ಕಾರಣಕ್ಕೆ ಜಗಳಲ; ಹಲ್ಲೆ: ಇಲ್ಲಿನ ಗುರುದೇವ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮದನ ಜೆ. ಅವರ ಮೇಲೆ ವಿಲ್ಸನ್ ಗಾಯಕವಾಡ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮದನ ಅವರು ಮನೆ ಎದುರು ನಾಯಿ ಹಿಡಿದುಕೊಂಡು ನಿಂತಿದ್ದರು. ಈ ವೇಳೆ ವೈಷ್ಣವಿ ಗಾಯಕವಾಡ ಅವರ ನಾಯಿ ಮದನ ಅವರಿಗೆ ಕಚ್ಚಲು ಮುಂದಾಗಿದೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ವಿಲ್ಸನ್ ಮಧ್ಯಪ್ರವೇಶಿಸಿ ಮದನ ಅವರಿಗೆ ಅವಾಚ್ಯವಾಗಿ ನಿಂದಿಸಿ, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಮದ್ಯದ ಅಮಲಿನಲ್ಲಿ ಪ್ರದೀಪ ಪೂಜಾರ ಎಂಬಾತ ತನ್ನ ಅಣ್ಣನೊಂದಿಗೆ ವಾಗ್ವಾದ ಮಾಡಿ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಪ್ರಕರಣ ಇಲ್ಲಿನ ಶಿವಶಂಕರ ಕಾಲೊನಿಯಲ್ಲಿ ಗುರುವಾರ ನಡೆದಿದೆ.</p>.<p>ಮಲ್ಲೇಶ ಪೂಜಾರ (42) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಪ್ರದೀಪ ಪೂಜಾರ ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು: ತಾಲ್ಲೂಕಿನ ಕಿರೆಸೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಗುರುವಾರ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p>.<p>ಬಾಗಲಕೋಟೆ ಜಿಲ್ಲೆಯ ಕೆಲೂರ ಗ್ರಾಮದ ಶರಿಸಾಬ್ ಸಿಮಿಕೇರಿ (36) ಮೃತ ಬೈಕ್ ಸವಾರ. ಬೈಕ್ನ ಹಿಂಬದಿ ಸವಾರ, ಅದೇ ಗ್ರಾಮದ ದುರುಗೇಶ ವಡ್ಡರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕ್ಷುಲ್ಲಕ ಕಾರಣಕ್ಕೆ ಜಗಳಲ; ಹಲ್ಲೆ: ಇಲ್ಲಿನ ಗುರುದೇವ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮದನ ಜೆ. ಅವರ ಮೇಲೆ ವಿಲ್ಸನ್ ಗಾಯಕವಾಡ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮದನ ಅವರು ಮನೆ ಎದುರು ನಾಯಿ ಹಿಡಿದುಕೊಂಡು ನಿಂತಿದ್ದರು. ಈ ವೇಳೆ ವೈಷ್ಣವಿ ಗಾಯಕವಾಡ ಅವರ ನಾಯಿ ಮದನ ಅವರಿಗೆ ಕಚ್ಚಲು ಮುಂದಾಗಿದೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ವಿಲ್ಸನ್ ಮಧ್ಯಪ್ರವೇಶಿಸಿ ಮದನ ಅವರಿಗೆ ಅವಾಚ್ಯವಾಗಿ ನಿಂದಿಸಿ, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>