<p><strong>ಹುಬ್ಬಳ್ಳಿ</strong>: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ, ಅಧಿಕ ಲಾಭ ನೀಡುವುದಾಗಿ ನಂಬಿಸಿ ಗದಗ ಜಿಲ್ಲೆಯ ನಾಗರಾಜ ಅವರಿಂದ ₹14 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಯೂಟ್ಯೂಬ್ನಲ್ಲಿ ರೋಹನಕುಮಾರ ಎಂಬಾತ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ನೀಡಿದ ವಿಡಿಯೊ ವೀಕ್ಷಿಸಿದ ನಾಗರಾಜ, ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ನಂತರ ಅವರಿಂದ ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. </p>.<p>₹8 ಲಕ್ಷ ವಂಚನೆ: ಲಾಭದ ಆಮಿಷವೊಡ್ಡಿ ವಿದ್ಯಾನಗರದ ಅಡಿವೆಪ್ಪ ಎಚ್., ಅವರಿಗೆ ₹8 ಲಕ್ಷ ವಂಚಿಸಲಾಗಿದೆ.</p>.<p>ಫೇಸ್ಬುಕ್ನಲ್ಲಿ ಪ್ರಸಾರವಾದ ಹೂಡಿಕೆ ಕುರಿತ ಜಾಹೀರಾತು ನೋಡಿ, ಅದರಲ್ಲಿದ್ದ ಸಂಖೆಯನ್ನು ಸಂಪರ್ಕಿಸಿದಾಗ ವಂಚಕರು ಅಡಿವೆಪ್ಪ ಅವರಿಗೆ ಜಿಎಸ್ಐಎನ್ ಆ್ಯಪ್ ಲಿಂಕ್ ಕಳುಹಿಸಿದ್ದಾರೆ. ನಂತರ ಆಧಾರ್, ಪ್ಯಾನ್ ಕಾರ್ಡ್ ಸಂಖ್ಯೆ ಪಡೆದು, ಐಡಿ ಸೃಜಿಸಿ ಹಂತ ಹಂತವಾಗಿ ₹23 ಲಕ್ಷ ವರ್ಗಾಯಿಸಿಕೊಂಡಿದ್ದಾರೆ. ಲಾಭಾಂಶವೆಂದು ₹15 ಲಕ್ಷ ಮರಳಿಸಿ, ₹8 ಲಕ್ಷ ನೀಡದೆ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>₹7.93 ಲಕ್ಷ ವಂಚನೆ: ಕಳವಾಗಿದ್ದ ಮೊಬೈಲ್ ಪೋನ್ ಹಾಗೂ ಲ್ಯಾಪ್ಟಾಪ್ ಬಳಸಿ ₹7,93,084 ವರ್ಗಾಯಿಸಿಕೊಂಡು ವಂಚಿಸಿದ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಗೋಕುಲ್ ರಸ್ತೆಯ ಶರಣಬಸಪ್ಪ ಬಿ., ಅವರು ಈಚೆಗೆ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಅವರ ವಸ್ತುಗಳು ಕಳವಾಗಿದ್ದವು. ಅವುಗಳನ್ನು ಬಳಸಿ ಸಾಮಗ್ರಿಗಳನ್ನು ಖರೀದಿಸಿ, ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ, ಅಧಿಕ ಲಾಭ ನೀಡುವುದಾಗಿ ನಂಬಿಸಿ ಗದಗ ಜಿಲ್ಲೆಯ ನಾಗರಾಜ ಅವರಿಂದ ₹14 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಯೂಟ್ಯೂಬ್ನಲ್ಲಿ ರೋಹನಕುಮಾರ ಎಂಬಾತ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ನೀಡಿದ ವಿಡಿಯೊ ವೀಕ್ಷಿಸಿದ ನಾಗರಾಜ, ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ನಂತರ ಅವರಿಂದ ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. </p>.<p>₹8 ಲಕ್ಷ ವಂಚನೆ: ಲಾಭದ ಆಮಿಷವೊಡ್ಡಿ ವಿದ್ಯಾನಗರದ ಅಡಿವೆಪ್ಪ ಎಚ್., ಅವರಿಗೆ ₹8 ಲಕ್ಷ ವಂಚಿಸಲಾಗಿದೆ.</p>.<p>ಫೇಸ್ಬುಕ್ನಲ್ಲಿ ಪ್ರಸಾರವಾದ ಹೂಡಿಕೆ ಕುರಿತ ಜಾಹೀರಾತು ನೋಡಿ, ಅದರಲ್ಲಿದ್ದ ಸಂಖೆಯನ್ನು ಸಂಪರ್ಕಿಸಿದಾಗ ವಂಚಕರು ಅಡಿವೆಪ್ಪ ಅವರಿಗೆ ಜಿಎಸ್ಐಎನ್ ಆ್ಯಪ್ ಲಿಂಕ್ ಕಳುಹಿಸಿದ್ದಾರೆ. ನಂತರ ಆಧಾರ್, ಪ್ಯಾನ್ ಕಾರ್ಡ್ ಸಂಖ್ಯೆ ಪಡೆದು, ಐಡಿ ಸೃಜಿಸಿ ಹಂತ ಹಂತವಾಗಿ ₹23 ಲಕ್ಷ ವರ್ಗಾಯಿಸಿಕೊಂಡಿದ್ದಾರೆ. ಲಾಭಾಂಶವೆಂದು ₹15 ಲಕ್ಷ ಮರಳಿಸಿ, ₹8 ಲಕ್ಷ ನೀಡದೆ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>₹7.93 ಲಕ್ಷ ವಂಚನೆ: ಕಳವಾಗಿದ್ದ ಮೊಬೈಲ್ ಪೋನ್ ಹಾಗೂ ಲ್ಯಾಪ್ಟಾಪ್ ಬಳಸಿ ₹7,93,084 ವರ್ಗಾಯಿಸಿಕೊಂಡು ವಂಚಿಸಿದ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಗೋಕುಲ್ ರಸ್ತೆಯ ಶರಣಬಸಪ್ಪ ಬಿ., ಅವರು ಈಚೆಗೆ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಅವರ ವಸ್ತುಗಳು ಕಳವಾಗಿದ್ದವು. ಅವುಗಳನ್ನು ಬಳಸಿ ಸಾಮಗ್ರಿಗಳನ್ನು ಖರೀದಿಸಿ, ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>