<p><strong>ಹುಬ್ಬಳ್ಳಿ:</strong> ‘ಆಧಾರ್ ಸೇವಾ ಕೇಂದ್ರಗಳಲ್ಲಿ ಕನ್ನಡ ಬಳಕೆ ಜತೆಗೆ, ತಾಂತ್ರಿಕ ಸಮಸ್ಯೆಗಳ ಬಗ್ಗೆ ಭಿತ್ತಿ ಪತ್ರ ಅಂಟಿಸಬೇಕು. ನಿಯಮಕ್ಕಿಂತ ಹೆಚ್ಚು ಹಣ ವಸೂಲಿ ಮಾಡದೆ, ಸಾರ್ವಜನಿಕರಿಂದ ದೂರುಗಳು ಬಾರದಂತೆ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.</p>.<p>ನಗರದ ಕೇಶ್ವಾಪುರದ ಹುಬ್ಬಳ್ಳಿ ರೈಲ್ವೆ ವಿಭಾಗೀಯ ಕಚೇರಿ ಬಳಿ ಆರಂಭವಾಗಿರುವ ನೂತನ ಆಧಾರ್ ಸೇವಾ–ಯುಐಡಿಎಐ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವ ಸೇವೆಗಳಿಗೆ ದರ ಎಷ್ಟು ಎಂಬ ಬಗ್ಗೆ ಸೇವಾ ಕೇಂದ್ರದಲ್ಲಿ ಮಾಹಿತಿ ಫಲಕ ಹಾಕಬೇಕು. ಆಧಾರ್ ಸೇವಾ ಕೇಂದ್ರದಲ್ಲಿನ ಸೇವೆಗಳ ಕುರಿತು ವಿಡಿಯೊಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಬೇಕು’ ಎಂದರು.</p>.<p>‘ಅವಳಿ ನಗರದ ನಾಗರಿಕರ ಸೇವೆಗಾಗಿ ಆಧಾರ್ ಸೇವಾ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡದಲ್ಲಿದ್ದ ಆಧಾರ್ ಕೇಂದ್ರದ ಟೆಂಡರ್ ಅವಧಿ ಮುಕ್ತಾಯವಾಗಿರುವುದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಹೊಸ ಟೆಂಡರ್ ಕರೆದು ಸೇವಾ ಕೇಂದ್ರ ಆರಂಭಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಪ್ರಸ್ತುತ ಜಿಲ್ಲೆಯಲ್ಲಿನ ಎರಡು ಕೇಂದ್ರಗಳ ಪೈಕಿ ಹುಬ್ಬಳ್ಳಿಯ ಕೇಂದ್ರ ಮಾತ್ರ ಸಕ್ರಿಯವಾಗಿದೆ. ಧಾರವಾಡ ನಗರ ಶಿಕ್ಷಣ ಕಾಶಿಯಾಗಿದ್ದು, ಇಲ್ಲಿ ಹಲವಾರು ವಿಶ್ವವಿದ್ಯಾಲಯಗಳು, ಶಾಲಾ-ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇರುವುದರಿಂದ ಆಧಾರ್ ಕೇಂದ್ರದ ಬೇಡಿಕೆ ಹೆಚ್ಚಿದೆ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಧಾರವಾಡ ನಗರದಲ್ಲಿಯೂ ಆಧಾರ್ ಸೇವಾ ಕೇಂದ್ರ ಪುನರಾರಂಭಿಸಲು ಜಿಲ್ಲಾಡಳಿತವು ಯುಐಡಿಎಐಗೆ ಪ್ರಸ್ತಾವ ಸಲ್ಲಿಸಿದೆ’ ಎಂದು ತಿಳಿಸಿದರು.</p>.<p>‘ಈ ನೂತನ ಕೇಂದ್ರದಲ್ಲಿ ನಾಲ್ಕು ಕೌಂಟರ್ಗಳಿದ್ದು, ಸುಗಮ ನಿರ್ವಹಣೆಗಾಗಿ ಯುಐಡಿಎಐ ವತಿಯಿಂದ ಆಪರೇಷನ್ ಮ್ಯಾನೇಜರ್ ಅವರನ್ನು ನೇಮಿಸಲಾಗಿದೆ. ಆಧಾರ್ಗೆ ಸಂಬಂಧಿತ ಎಲ್ಲ ಸೇವೆಗಳನ್ನು ಇಲ್ಲಿ ಪಡೆಯಬಹುದಾಗಿದೆ’ ಎಂದರು.</p>.<p>ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ, ಯುಐಡಿಎಐ ನಿರ್ದೇಶಕ ಮನೋಜ್ ಕುಮಾರ, ಸಾಮ್ಯೂಲ್ ರಾಯ್, ಜಿಲ್ಲಾ ಆಧಾರ್ ಸಂಯೋಜಕ ರುದ್ರೇಶ ಎಂ., ಯುಐಡಿಎಐ ಯೋಜನಾ ವ್ಯವಸ್ಥಾಪಕ ಜಯಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಆಧಾರ್ ಸೇವಾ ಕೇಂದ್ರಗಳಲ್ಲಿ ಕನ್ನಡ ಬಳಕೆ ಜತೆಗೆ, ತಾಂತ್ರಿಕ ಸಮಸ್ಯೆಗಳ ಬಗ್ಗೆ ಭಿತ್ತಿ ಪತ್ರ ಅಂಟಿಸಬೇಕು. ನಿಯಮಕ್ಕಿಂತ ಹೆಚ್ಚು ಹಣ ವಸೂಲಿ ಮಾಡದೆ, ಸಾರ್ವಜನಿಕರಿಂದ ದೂರುಗಳು ಬಾರದಂತೆ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.</p>.<p>ನಗರದ ಕೇಶ್ವಾಪುರದ ಹುಬ್ಬಳ್ಳಿ ರೈಲ್ವೆ ವಿಭಾಗೀಯ ಕಚೇರಿ ಬಳಿ ಆರಂಭವಾಗಿರುವ ನೂತನ ಆಧಾರ್ ಸೇವಾ–ಯುಐಡಿಎಐ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವ ಸೇವೆಗಳಿಗೆ ದರ ಎಷ್ಟು ಎಂಬ ಬಗ್ಗೆ ಸೇವಾ ಕೇಂದ್ರದಲ್ಲಿ ಮಾಹಿತಿ ಫಲಕ ಹಾಕಬೇಕು. ಆಧಾರ್ ಸೇವಾ ಕೇಂದ್ರದಲ್ಲಿನ ಸೇವೆಗಳ ಕುರಿತು ವಿಡಿಯೊಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಬೇಕು’ ಎಂದರು.</p>.<p>‘ಅವಳಿ ನಗರದ ನಾಗರಿಕರ ಸೇವೆಗಾಗಿ ಆಧಾರ್ ಸೇವಾ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡದಲ್ಲಿದ್ದ ಆಧಾರ್ ಕೇಂದ್ರದ ಟೆಂಡರ್ ಅವಧಿ ಮುಕ್ತಾಯವಾಗಿರುವುದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಹೊಸ ಟೆಂಡರ್ ಕರೆದು ಸೇವಾ ಕೇಂದ್ರ ಆರಂಭಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಪ್ರಸ್ತುತ ಜಿಲ್ಲೆಯಲ್ಲಿನ ಎರಡು ಕೇಂದ್ರಗಳ ಪೈಕಿ ಹುಬ್ಬಳ್ಳಿಯ ಕೇಂದ್ರ ಮಾತ್ರ ಸಕ್ರಿಯವಾಗಿದೆ. ಧಾರವಾಡ ನಗರ ಶಿಕ್ಷಣ ಕಾಶಿಯಾಗಿದ್ದು, ಇಲ್ಲಿ ಹಲವಾರು ವಿಶ್ವವಿದ್ಯಾಲಯಗಳು, ಶಾಲಾ-ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇರುವುದರಿಂದ ಆಧಾರ್ ಕೇಂದ್ರದ ಬೇಡಿಕೆ ಹೆಚ್ಚಿದೆ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಧಾರವಾಡ ನಗರದಲ್ಲಿಯೂ ಆಧಾರ್ ಸೇವಾ ಕೇಂದ್ರ ಪುನರಾರಂಭಿಸಲು ಜಿಲ್ಲಾಡಳಿತವು ಯುಐಡಿಎಐಗೆ ಪ್ರಸ್ತಾವ ಸಲ್ಲಿಸಿದೆ’ ಎಂದು ತಿಳಿಸಿದರು.</p>.<p>‘ಈ ನೂತನ ಕೇಂದ್ರದಲ್ಲಿ ನಾಲ್ಕು ಕೌಂಟರ್ಗಳಿದ್ದು, ಸುಗಮ ನಿರ್ವಹಣೆಗಾಗಿ ಯುಐಡಿಎಐ ವತಿಯಿಂದ ಆಪರೇಷನ್ ಮ್ಯಾನೇಜರ್ ಅವರನ್ನು ನೇಮಿಸಲಾಗಿದೆ. ಆಧಾರ್ಗೆ ಸಂಬಂಧಿತ ಎಲ್ಲ ಸೇವೆಗಳನ್ನು ಇಲ್ಲಿ ಪಡೆಯಬಹುದಾಗಿದೆ’ ಎಂದರು.</p>.<p>ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ, ಯುಐಡಿಎಐ ನಿರ್ದೇಶಕ ಮನೋಜ್ ಕುಮಾರ, ಸಾಮ್ಯೂಲ್ ರಾಯ್, ಜಿಲ್ಲಾ ಆಧಾರ್ ಸಂಯೋಜಕ ರುದ್ರೇಶ ಎಂ., ಯುಐಡಿಎಐ ಯೋಜನಾ ವ್ಯವಸ್ಥಾಪಕ ಜಯಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>