<p><strong>ಧಾರವಾಡ</strong>: ‘ನಗರದ ಹೊರವಲಯದ ತಡಸಿನಕೊಪ್ಪ ಸಮೀಪ ಈಚೆಗೆ ಫೈರಿಂಗ್ ನಡೆದಿರುವುದು ಹುಬ್ಬಳ್ಳಿ–ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಉದಾಹರಣೆ. ಫೈರಿಂಗ್ ಮಾಡಿರುವವವನ ವಿರುದ್ಧ ಬಿಡ್ನಾಳ, ಗಾಮನಗಟ್ಟಿಯಲ್ಲಿ ವಂಚನೆ ಮಾಡಿರುವ ಆರೋಪ ಇದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದೂರಿದರು.</p>.<p>ತಡಸಿನಕೊಪ್ಪ ಬಳಿ ನಡೆದ ಫೈರಿಂಗ್ನಲ್ಲಿ ಗಾಯಗೊಂಡ ವಾಲಿಕಾರ ಅವರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಫೈರಿಂಗ್ ಆಗಿ ನಾಲ್ಕು ದಿನವಾಗಿದೆ. ಫೈರಿಂಗ್ ಮಾಡಿದವನನ್ನು ಪೊಲೀಸರು ಇನ್ನು ಬಂಧಿಸಿಲ್ಲ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.</p>.<p>‘ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಇಲ್ಲಿಗೆ ಬಂದಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಗುಂಡು ಹಾರಿಸಿದವ ಸಿಕ್ಕಿಲ್ಲ. ಗುಂಡು ಹಾರಿಸಿದ ವ್ಯಕ್ತಿಗೆ ಗನ್ ಲೈಸೆನ್ಸ್ ಇತ್ತೋ? ಇಲ್ಲವೋ? ಎಂಬುದನ್ನು ಇನ್ನು ಪೊಲೀಸರು ಪತ್ತೆ ಹಚ್ಚಿಲ್ಲ’ ಎಂದು ದೂರಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-24-1293019020</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ನಗರದ ಹೊರವಲಯದ ತಡಸಿನಕೊಪ್ಪ ಸಮೀಪ ಈಚೆಗೆ ಫೈರಿಂಗ್ ನಡೆದಿರುವುದು ಹುಬ್ಬಳ್ಳಿ–ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಉದಾಹರಣೆ. ಫೈರಿಂಗ್ ಮಾಡಿರುವವವನ ವಿರುದ್ಧ ಬಿಡ್ನಾಳ, ಗಾಮನಗಟ್ಟಿಯಲ್ಲಿ ವಂಚನೆ ಮಾಡಿರುವ ಆರೋಪ ಇದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದೂರಿದರು.</p>.<p>ತಡಸಿನಕೊಪ್ಪ ಬಳಿ ನಡೆದ ಫೈರಿಂಗ್ನಲ್ಲಿ ಗಾಯಗೊಂಡ ವಾಲಿಕಾರ ಅವರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಫೈರಿಂಗ್ ಆಗಿ ನಾಲ್ಕು ದಿನವಾಗಿದೆ. ಫೈರಿಂಗ್ ಮಾಡಿದವನನ್ನು ಪೊಲೀಸರು ಇನ್ನು ಬಂಧಿಸಿಲ್ಲ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.</p>.<p>‘ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಇಲ್ಲಿಗೆ ಬಂದಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಗುಂಡು ಹಾರಿಸಿದವ ಸಿಕ್ಕಿಲ್ಲ. ಗುಂಡು ಹಾರಿಸಿದ ವ್ಯಕ್ತಿಗೆ ಗನ್ ಲೈಸೆನ್ಸ್ ಇತ್ತೋ? ಇಲ್ಲವೋ? ಎಂಬುದನ್ನು ಇನ್ನು ಪೊಲೀಸರು ಪತ್ತೆ ಹಚ್ಚಿಲ್ಲ’ ಎಂದು ದೂರಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-24-1293019020</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>