<p><strong>ಹುಬ್ಬಳ್ಳಿ:</strong> ನಗರದ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿಕಾಲೊನಿಯ ಕಾರುಣ್ಯ ಅಪಾರ್ಟ್ ಮೆಂಟ್ 2ನೇ ಮಹಡಿಯಲ್ಲಿನ ಮನೆಯಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.</p>.<p>ಘಟನೆಯಲ್ಲಿ ಮಹಾಂತೇಶ ಬಳ್ಳಾರಿ (40) ಅವರಿಗೆ ಶೇ 15ರಷ್ಟು, ಅವರ ಪತ್ನಿ ಗಂಗಮ್ಮ ಬಳ್ಳಾರಿ(38) ಅವರಿಗೆ ಶೇ 65ರಷ್ಟು, ಮಕ್ಕಳಾದ ಕಾರಣ್ಯ ಎಂ. ಬಳ್ಳಾರಿಗೆ (9) ಶೇ 8ರಷ್ಟು ಹಾಗೂ ಮನೋರಂಜನ್ ಬಳ್ಳಾರಿಗೆ (7) ಶೇ13ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>'ರಾತ್ರಿ ಕುಟುಂಬದವರು ಮಲಗಿದ್ದಾಗ ಅಡುಗೆ ಅನಿಲ ಸೋರಿಕೆಯಾಗಿದೆ. ಮೊಬೈಲ್ ಫೋನ್ ಆನ್ ಮಾಡಿದಾಗ ಬೆಂಕಿ ಹೊತ್ತಿಕೊಂಡಿದೆ ಎಂಬುದಾಗಿ ತಿಳಿದುಬಂದಿದೆ. ಘಟನೆ ಕುರಿತಾಗಿ ಗಂಗಮ್ಮನ ಕುಟುಂಬದವರಲ್ಲಿ ಅನುಮಾನವಿದೆ. ಹೆಚ್ಚು ಗಾಯಗೊಂಡಿರುವ ಗಂಗಮ್ಮ ಹೇಳಿಕೆ ನೀಡುವ ಸ್ಥಿತಿಯಲ್ಲಿದ್ದರೆ ಅವರಿಂದ ಮಾಹಿತಿ ಪಡೆಯಲಾಗುವುದು' ಎಂದರು.</p>.<h2>ಪತಿ ಹಾಗೂ ಕುಟುಂಬದವರಿಂದ ಕೃತ್ಯ ಆರೋಪ:</h2><p> 'ಮಹಾಂತೇಶ ಹಾಗೂ ಗಂಗಮ್ಮ ಇಬ್ಬರೂ ಶಿಕ್ಷಕರಾಗಿದ್ದು, ಆಗಾಗ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಮಹಾಂತೇಶ, ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ. ಕುಟುಂಬದವರೊಂದಿಗೆ ಸೇರಿಕೊಂಡು ಪತ್ನಿ ಕೊಲೆಗೆ ಯತ್ನಿಸಿದ್ದಾನೆ' ಎಂದು ಗಂಗಮ್ಮನ ಕುಟುಂಬದವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಗರದ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿಕಾಲೊನಿಯ ಕಾರುಣ್ಯ ಅಪಾರ್ಟ್ ಮೆಂಟ್ 2ನೇ ಮಹಡಿಯಲ್ಲಿನ ಮನೆಯಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.</p>.<p>ಘಟನೆಯಲ್ಲಿ ಮಹಾಂತೇಶ ಬಳ್ಳಾರಿ (40) ಅವರಿಗೆ ಶೇ 15ರಷ್ಟು, ಅವರ ಪತ್ನಿ ಗಂಗಮ್ಮ ಬಳ್ಳಾರಿ(38) ಅವರಿಗೆ ಶೇ 65ರಷ್ಟು, ಮಕ್ಕಳಾದ ಕಾರಣ್ಯ ಎಂ. ಬಳ್ಳಾರಿಗೆ (9) ಶೇ 8ರಷ್ಟು ಹಾಗೂ ಮನೋರಂಜನ್ ಬಳ್ಳಾರಿಗೆ (7) ಶೇ13ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>'ರಾತ್ರಿ ಕುಟುಂಬದವರು ಮಲಗಿದ್ದಾಗ ಅಡುಗೆ ಅನಿಲ ಸೋರಿಕೆಯಾಗಿದೆ. ಮೊಬೈಲ್ ಫೋನ್ ಆನ್ ಮಾಡಿದಾಗ ಬೆಂಕಿ ಹೊತ್ತಿಕೊಂಡಿದೆ ಎಂಬುದಾಗಿ ತಿಳಿದುಬಂದಿದೆ. ಘಟನೆ ಕುರಿತಾಗಿ ಗಂಗಮ್ಮನ ಕುಟುಂಬದವರಲ್ಲಿ ಅನುಮಾನವಿದೆ. ಹೆಚ್ಚು ಗಾಯಗೊಂಡಿರುವ ಗಂಗಮ್ಮ ಹೇಳಿಕೆ ನೀಡುವ ಸ್ಥಿತಿಯಲ್ಲಿದ್ದರೆ ಅವರಿಂದ ಮಾಹಿತಿ ಪಡೆಯಲಾಗುವುದು' ಎಂದರು.</p>.<h2>ಪತಿ ಹಾಗೂ ಕುಟುಂಬದವರಿಂದ ಕೃತ್ಯ ಆರೋಪ:</h2><p> 'ಮಹಾಂತೇಶ ಹಾಗೂ ಗಂಗಮ್ಮ ಇಬ್ಬರೂ ಶಿಕ್ಷಕರಾಗಿದ್ದು, ಆಗಾಗ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಮಹಾಂತೇಶ, ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ. ಕುಟುಂಬದವರೊಂದಿಗೆ ಸೇರಿಕೊಂಡು ಪತ್ನಿ ಕೊಲೆಗೆ ಯತ್ನಿಸಿದ್ದಾನೆ' ಎಂದು ಗಂಗಮ್ಮನ ಕುಟುಂಬದವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>