<p>ಹುಬ್ಬಳ್ಳಿ: ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ ಬಸನಗೌಡ್ರ ಅವರು ಮಂಗಳವಾರ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪ್ರಸ್ತುತ 2 ಸಾವಿರ ಟನ್ ಯೂರಿಯಾ ಹಾಗೂ 1,400 ಟನ್ ಡಿಎಪಿ ಗೊಬ್ಬರ ದಾಸ್ತಾನು ಇದೆ. ಆದರೂ ಈ ತನಕ ಸಮರ್ಪಕವಾಗಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಾಗುತ್ತಿಲ್ಲ’ ಎಂದು ರೈತ ಮುಖಂಡ ಹೇಮನಗೌಡ್ರ ದೂರಿದರು.</p>.<p>‘ಡಿಎಪಿ ರಸಗೊಬ್ಬರ ಪ್ರತಿ ಬ್ಯಾಗ್ಗೆ ₹1,350 ಸರ್ಕಾರಿ ದರ ನಿಗದಿಯಾಗಿದೆ. ಆದರೆ, ಸಹಕಾರಿ ಸಂಘಗಳಲ್ಲಿ ಬ್ಯಾಗ್ಗೆ ₹1,850 ರಿಂದ ₹2 ಸಾವಿರ ತನಕ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಂಡಿಲ್ಲ’ ಎಂದರು.</p>.<p>‘ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಸಹಕಾರಿ ಸಂಘಗಳಿಗೆ ಹಾಗೂ ಖಾಸಗಿ ವಿತರಕರಿಗೆ ಸೂಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ‘ಹೆಚ್ಚಿನ ದರಕ್ಕೆ ಬಿತ್ತನೆ ಬೀಜ, ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ವಿತರಣೆಗೆ ಸೂಚಿಸಲಾಗುವುದು’ ಎಂದು ಹೇಳಿದರು.</p>.<p>ಚನ್ನಬಸಪ್ಪ ಸಿದ್ದೂನವರ, ಜಯಪ್ಪ ಕಮಡೊಳ್ಳಿ, ಮೌಲಸಾಬ್, ಬಸವರಾಜ ಮಲ್ಲಿಗೆವಾಡ, ವಿಷ್ಣು ಬಾನೋಜಿ, ಶಿವಾನಂದ ತಳವಾರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-24-1792898132</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ ಬಸನಗೌಡ್ರ ಅವರು ಮಂಗಳವಾರ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪ್ರಸ್ತುತ 2 ಸಾವಿರ ಟನ್ ಯೂರಿಯಾ ಹಾಗೂ 1,400 ಟನ್ ಡಿಎಪಿ ಗೊಬ್ಬರ ದಾಸ್ತಾನು ಇದೆ. ಆದರೂ ಈ ತನಕ ಸಮರ್ಪಕವಾಗಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಾಗುತ್ತಿಲ್ಲ’ ಎಂದು ರೈತ ಮುಖಂಡ ಹೇಮನಗೌಡ್ರ ದೂರಿದರು.</p>.<p>‘ಡಿಎಪಿ ರಸಗೊಬ್ಬರ ಪ್ರತಿ ಬ್ಯಾಗ್ಗೆ ₹1,350 ಸರ್ಕಾರಿ ದರ ನಿಗದಿಯಾಗಿದೆ. ಆದರೆ, ಸಹಕಾರಿ ಸಂಘಗಳಲ್ಲಿ ಬ್ಯಾಗ್ಗೆ ₹1,850 ರಿಂದ ₹2 ಸಾವಿರ ತನಕ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಂಡಿಲ್ಲ’ ಎಂದರು.</p>.<p>‘ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಸಹಕಾರಿ ಸಂಘಗಳಿಗೆ ಹಾಗೂ ಖಾಸಗಿ ವಿತರಕರಿಗೆ ಸೂಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ‘ಹೆಚ್ಚಿನ ದರಕ್ಕೆ ಬಿತ್ತನೆ ಬೀಜ, ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ವಿತರಣೆಗೆ ಸೂಚಿಸಲಾಗುವುದು’ ಎಂದು ಹೇಳಿದರು.</p>.<p>ಚನ್ನಬಸಪ್ಪ ಸಿದ್ದೂನವರ, ಜಯಪ್ಪ ಕಮಡೊಳ್ಳಿ, ಮೌಲಸಾಬ್, ಬಸವರಾಜ ಮಲ್ಲಿಗೆವಾಡ, ವಿಷ್ಣು ಬಾನೋಜಿ, ಶಿವಾನಂದ ತಳವಾರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-24-1792898132</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>