<p>ವಾಣಿಜ್ಯ ನಗರಿ ಹುಬ್ಬಳ್ಳಿಯ ಕೇಂದ್ರ ಸ್ಥಾನ ಚನ್ನಮ್ಮ ಸರ್ಕಲ್. ಏಳು ರಸ್ತೆಗಳು ಬಂದು ಸೇರುವ ಈ ವೃತ್ತದಲ್ಲಿ ಸಂಚಾರ ದಟ್ಟಣೆ ಎನ್ನುವುದು ಸಾಮಾನ್ಯ ಸಮಸ್ಯೆ. ದಟ್ಟಣೆ ನಿಯಂತ್ರಿಸಲು ಈ ಸರ್ಕಲ್ ಅನ್ನು ಕೇಂದ್ರವಾಗಿಟ್ಟುಕೊಂಡು ನಿರ್ಮಿಸಲು ಉದ್ದೇಶಿಸಲಾಗಿರುವ 3.9 ಕಿ.ಮೀ. ಉದ್ದದ ಮೇಲ್ಸೇತುವೆಯ ಕಾಮಗಾರಿ ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ₹349.49 ಕೋಟಿ ವೆಚ್ಚದ ಈ ಕಾಮಗಾರಿಗೆ ಕಾರ್ಯಾದೇಶ ನೀಡಿದ್ದು 2022ರ ಜೂನ್ನಲ್ಲಿ. ಅಂದುಕೊಂಡಂತೆ ಎಲ್ಲವೂ ಆಗಿದ್ದರೆ 2024ರ ಜೂನ್ಗೇ ಈ ಕಾಮಗಾರಿ ಮುಗಿಯಬೇಕಿತ್ತು. ಈಗ, ತ್ವರಿತ ಕಾಮಗಾರಿಗಾಗಿ ಮತ್ತೆ ನಾಲ್ಕು ತಿಂಗಳು ಗಡುವು ನೀಡಲಾಗಿದ್ದು, ಚನ್ನಮ್ಮ ವೃತ್ತದ ಬಳಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>