<p>ಹುಬ್ಬಳ್ಳಿ: ನರಸಾಪುರ-ಹುಬ್ಬಳ್ಳಿ ಅಮರಾವತಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ₹4.22 ಲಕ್ಷ ಮೌಲ್ಯದ 8 ಕೆ.ಜಿ 459 ಗ್ರಾಂ ಗಾಂಜಾವನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ರೈಲಿನ ಸಾಮಾನ್ಯ ಬೋಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು, ಹುಬ್ಬಳ್ಳಿ ರೈಲು ನಿಲ್ದಾಣದ ಪ್ಲಾಟ್ಫಾರಂ 4ರಲ್ಲಿ ಬ್ಯಾಗ್ನಲ್ಲಿದ್ದ ಗಾಂಜಾ ವಶಪಡಿಸಿಕೊಂಡರು. ಈ ಬಗ್ಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಹುಬ್ಬಳ್ಳಿ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನಗರದ ಶಿಲ್ಪಾ ಹುಲ್ಲಂಬಿ (25) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಅವರ ಅತ್ತೆ, ನಾದಿನಿ ಸೇರಿ ಮೂವರ ವಿರುದ್ಧ ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಶಿಲ್ಪಾ ಅವರು ನಾಲ್ಕು ವರ್ಷಗಳ ಹಿಂದೆ ಹನುಮಂತ ಎಂಬುವರನ್ನು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಅವರ ಅತ್ತೆ ಕಿರುಕುಳ ಕೊಡುತ್ತಿದ್ದರು ಎಂದು ಶಿಲ್ಪಾ ಅವರ ತಾಯಿ ಸುಜಾತಾ ಪಾಟೀಲ ದೂರಿನಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-24-1330056980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ನರಸಾಪುರ-ಹುಬ್ಬಳ್ಳಿ ಅಮರಾವತಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ₹4.22 ಲಕ್ಷ ಮೌಲ್ಯದ 8 ಕೆ.ಜಿ 459 ಗ್ರಾಂ ಗಾಂಜಾವನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ರೈಲಿನ ಸಾಮಾನ್ಯ ಬೋಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು, ಹುಬ್ಬಳ್ಳಿ ರೈಲು ನಿಲ್ದಾಣದ ಪ್ಲಾಟ್ಫಾರಂ 4ರಲ್ಲಿ ಬ್ಯಾಗ್ನಲ್ಲಿದ್ದ ಗಾಂಜಾ ವಶಪಡಿಸಿಕೊಂಡರು. ಈ ಬಗ್ಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಹುಬ್ಬಳ್ಳಿ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನಗರದ ಶಿಲ್ಪಾ ಹುಲ್ಲಂಬಿ (25) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಅವರ ಅತ್ತೆ, ನಾದಿನಿ ಸೇರಿ ಮೂವರ ವಿರುದ್ಧ ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಶಿಲ್ಪಾ ಅವರು ನಾಲ್ಕು ವರ್ಷಗಳ ಹಿಂದೆ ಹನುಮಂತ ಎಂಬುವರನ್ನು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಅವರ ಅತ್ತೆ ಕಿರುಕುಳ ಕೊಡುತ್ತಿದ್ದರು ಎಂದು ಶಿಲ್ಪಾ ಅವರ ತಾಯಿ ಸುಜಾತಾ ಪಾಟೀಲ ದೂರಿನಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-24-1330056980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>