<p><strong>ಹುಬ್ಬಳ್ಳಿ:</strong> ‘ಇತ್ತೀಚಿಗೆ ಹಿಂದೂ ಧರ್ಮ ಹಾಗೂ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದ್ದು, ಮುಂದೊಂದು ದಿನ ನಾವೇ ಅಲ್ಪಸಂಖ್ಯಾತರಾಗಬಹುದು. ಸಮಸ್ತ ಹಿಂದೂಗಳು ಜಾಗೃತರಾಗಬೇಕು’ ಎಂದು ಆರ್ಎಸ್ಎಸ್ ಕರ್ನಾಟಕ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಶಿ ಹೇಳಿದರು.</p>.<p>ಮೂರು ಸಾವಿರಮಠ ನಗರ ಹಿಂದೂ ಸಮ್ಮೇಳನ ಸಮಿತಿಯಿಂದ ನಗರದ ಮೂರುಸಾವಿರ ಮಠದ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿಂದೂ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>ಲವ್ ಜಿಹಾದ್ ಜತೆಗೆ ಇನ್ನಿತರ ಮಾರ್ಗದ ಮೂಲಕ ಹಿಂದೂ ಸಮಾಜ ಒಡೆಯಲು ಷಡ್ಯಂತ್ರ ನಡೆಸುತ್ತಿದ್ದಾರೆ. ಎಲ್ಲರೂ ಒಂದಾಗಿ ಮುನ್ನಡೆಯಬೇಕು’ ಎಂದರು.</p>.<p>ಮೂರುಸಾವಿರಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ‘ಯೋಗ ಭೂಮಿ ಭಾರತದಲ್ಲಿ ಹಿಂದೂ ಧರ್ಮದ ಆಚರಣೆ ಅನಾದಿ ಕಾಲದಿಂದ ಇದೆ. ನಮ್ಮ ಆಚರಣೆ, ಪದ್ಧತಿಗಳನ್ನು ಪಾಲಿಸಬೇಕು. ಕೀಳರಿಮೆ ಬಿಟ್ಟು, ಒಂದಾಗಿ ಬಾಳಬೇಕು’ ಎಂದು ಹೇಳಿದರು.</p>.<p>ಸಮಾಜದ ಮುಖಂಡ ವಿಠ್ಠಲ ಲದ್ವಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ ದಿವಟೆ, ಬಸವರಾಜ ಕುಂದಗೋಳ, ನಾಗರಾಜ ಕಲಾಲ, ಭಾಸ್ಕರ ಜಿತೂರಿ, ವಿನಾಯಕ ಲದ್ವಾ ಇದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಪೂರ್ಣಕುಂಭ ಶೋಭಾಯಾತ್ರೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಇತ್ತೀಚಿಗೆ ಹಿಂದೂ ಧರ್ಮ ಹಾಗೂ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದ್ದು, ಮುಂದೊಂದು ದಿನ ನಾವೇ ಅಲ್ಪಸಂಖ್ಯಾತರಾಗಬಹುದು. ಸಮಸ್ತ ಹಿಂದೂಗಳು ಜಾಗೃತರಾಗಬೇಕು’ ಎಂದು ಆರ್ಎಸ್ಎಸ್ ಕರ್ನಾಟಕ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಶಿ ಹೇಳಿದರು.</p>.<p>ಮೂರು ಸಾವಿರಮಠ ನಗರ ಹಿಂದೂ ಸಮ್ಮೇಳನ ಸಮಿತಿಯಿಂದ ನಗರದ ಮೂರುಸಾವಿರ ಮಠದ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿಂದೂ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>ಲವ್ ಜಿಹಾದ್ ಜತೆಗೆ ಇನ್ನಿತರ ಮಾರ್ಗದ ಮೂಲಕ ಹಿಂದೂ ಸಮಾಜ ಒಡೆಯಲು ಷಡ್ಯಂತ್ರ ನಡೆಸುತ್ತಿದ್ದಾರೆ. ಎಲ್ಲರೂ ಒಂದಾಗಿ ಮುನ್ನಡೆಯಬೇಕು’ ಎಂದರು.</p>.<p>ಮೂರುಸಾವಿರಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ‘ಯೋಗ ಭೂಮಿ ಭಾರತದಲ್ಲಿ ಹಿಂದೂ ಧರ್ಮದ ಆಚರಣೆ ಅನಾದಿ ಕಾಲದಿಂದ ಇದೆ. ನಮ್ಮ ಆಚರಣೆ, ಪದ್ಧತಿಗಳನ್ನು ಪಾಲಿಸಬೇಕು. ಕೀಳರಿಮೆ ಬಿಟ್ಟು, ಒಂದಾಗಿ ಬಾಳಬೇಕು’ ಎಂದು ಹೇಳಿದರು.</p>.<p>ಸಮಾಜದ ಮುಖಂಡ ವಿಠ್ಠಲ ಲದ್ವಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ ದಿವಟೆ, ಬಸವರಾಜ ಕುಂದಗೋಳ, ನಾಗರಾಜ ಕಲಾಲ, ಭಾಸ್ಕರ ಜಿತೂರಿ, ವಿನಾಯಕ ಲದ್ವಾ ಇದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಪೂರ್ಣಕುಂಭ ಶೋಭಾಯಾತ್ರೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>