<p>ಹುಬ್ಬಳ್ಳಿ: ‘ಅನ್ಯಧರ್ಮೀಯರ ದಾಳಿ ಯಿಂದ ಹಿಂದುತ್ವಕ್ಕೆ ಧಕ್ಕೆಯಾಗುತ್ತಿದ್ದು,ರಕ್ಷಣೆಗೆ ಸಂಘಟನಾತ್ಮಕ ಹೋರಾಟ ಅವಶ್ಯ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.</p>.<p>ನಗರದಲ್ಲಿ ಶನಿವಾರ ಬಿಜೆಪಿ ಹುಬ್ಬಳ್ಳಿ– ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಮತ್ತು ಮಂಡಲ ಮಟ್ಟದ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಿಂದುತ್ವದ ರಕ್ಷಣೆಗೆ ಎಲ್ಲರೂ ಜೊತೆಗೂಡಿ ಹೋರಾಡಬೇಕಿದೆ’ ಎಂದರು.</p>.<p>‘ಮೂರು ವರ್ಷಕ್ಕೊಮ್ಮೆ ಪಕ್ಷದ ಪದಾಧಿಕಾರಿಗಳ ಬದಲಾವಣೆ, ಹೊಸ ಸೇರ್ಪಡೆ ಪ್ರಕ್ರಿಯೆ ನಡೆಯುತ್ತದೆ.ಕಾರ್ಯಕರ್ತರು ಪಕ್ಷದ ತತ್ವ ಸಿದ್ಧಾಂತವನ್ನು ಅಧ್ಯಯನ ಮಾಡಬೇಕು. ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಬೇಕು’ ಎಂದರು.</p>.<p>ಹು–ಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರು, ‘ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳಲ್ಲಿ ಸಂಘಟನೆ ಮೂಡಿಸುವುದು ಹಾಗೂ ಅವರ ವ್ಯಕ್ತಿತ್ವ ವಿಕಸನ ಮಾಡುವುದು ಈ ಕಾರ್ಯಕ್ರಮದ ಉದ್ದೇಶ’ ಎಂದರು.</p>.<p>ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಮಂಡಲ ಅಧ್ಯಕ್ಷ ಮಂಜುನಾಥ ಕಾಟಕರ್, ಧಾರವಾಡ ವಿಭಾಗದ ಪ್ರಶಿಕ್ಷಣ ಸಹ– ಸಂಯೋಜಕ ಶ್ರೀಪತಿ ಉಡುಪಿ ಮಾತನಾಡಿದರು.</p>.<p>ಪಕ್ಷದ ಮುಖಂಡರಾದ ಅಶೋಕ ಕಾಟವೆ, ಬೋಜರಾಜ ಕರೋದಿ, ಚಂದ್ರಶೇಖರ ಗೋಕಾಕ, ನಾರಾಯಣ ಜರತಾರಘರ, ರಾಧಾಬಾಯಿ ಸಫಾರೆ, ಶಾಂತಾ ಹಿರೇಮಠ, ಶೀಲಾ ಎಂ.ಕಾಟಕರ, ಶಿವು ಮೆಣಸಿನಕಾಯಿ ಮತ್ತು ಪ್ರವೀಣ ಕುಬಸದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-24-1362035714</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಅನ್ಯಧರ್ಮೀಯರ ದಾಳಿ ಯಿಂದ ಹಿಂದುತ್ವಕ್ಕೆ ಧಕ್ಕೆಯಾಗುತ್ತಿದ್ದು,ರಕ್ಷಣೆಗೆ ಸಂಘಟನಾತ್ಮಕ ಹೋರಾಟ ಅವಶ್ಯ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.</p>.<p>ನಗರದಲ್ಲಿ ಶನಿವಾರ ಬಿಜೆಪಿ ಹುಬ್ಬಳ್ಳಿ– ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಮತ್ತು ಮಂಡಲ ಮಟ್ಟದ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಿಂದುತ್ವದ ರಕ್ಷಣೆಗೆ ಎಲ್ಲರೂ ಜೊತೆಗೂಡಿ ಹೋರಾಡಬೇಕಿದೆ’ ಎಂದರು.</p>.<p>‘ಮೂರು ವರ್ಷಕ್ಕೊಮ್ಮೆ ಪಕ್ಷದ ಪದಾಧಿಕಾರಿಗಳ ಬದಲಾವಣೆ, ಹೊಸ ಸೇರ್ಪಡೆ ಪ್ರಕ್ರಿಯೆ ನಡೆಯುತ್ತದೆ.ಕಾರ್ಯಕರ್ತರು ಪಕ್ಷದ ತತ್ವ ಸಿದ್ಧಾಂತವನ್ನು ಅಧ್ಯಯನ ಮಾಡಬೇಕು. ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಬೇಕು’ ಎಂದರು.</p>.<p>ಹು–ಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರು, ‘ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳಲ್ಲಿ ಸಂಘಟನೆ ಮೂಡಿಸುವುದು ಹಾಗೂ ಅವರ ವ್ಯಕ್ತಿತ್ವ ವಿಕಸನ ಮಾಡುವುದು ಈ ಕಾರ್ಯಕ್ರಮದ ಉದ್ದೇಶ’ ಎಂದರು.</p>.<p>ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಮಂಡಲ ಅಧ್ಯಕ್ಷ ಮಂಜುನಾಥ ಕಾಟಕರ್, ಧಾರವಾಡ ವಿಭಾಗದ ಪ್ರಶಿಕ್ಷಣ ಸಹ– ಸಂಯೋಜಕ ಶ್ರೀಪತಿ ಉಡುಪಿ ಮಾತನಾಡಿದರು.</p>.<p>ಪಕ್ಷದ ಮುಖಂಡರಾದ ಅಶೋಕ ಕಾಟವೆ, ಬೋಜರಾಜ ಕರೋದಿ, ಚಂದ್ರಶೇಖರ ಗೋಕಾಕ, ನಾರಾಯಣ ಜರತಾರಘರ, ರಾಧಾಬಾಯಿ ಸಫಾರೆ, ಶಾಂತಾ ಹಿರೇಮಠ, ಶೀಲಾ ಎಂ.ಕಾಟಕರ, ಶಿವು ಮೆಣಸಿನಕಾಯಿ ಮತ್ತು ಪ್ರವೀಣ ಕುಬಸದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-24-1362035714</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>