<p><strong>ಹುಬ್ಬಳ್ಳಿ</strong>: ತಾಲ್ಲೂಕಿನ ವಿವಿಧೆಡೆ ಮನೆಗಳ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಗ್ರಾಮೀಣ ಠಾಣೆ ಪೊಲೀಸರು, ₹9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.</p><p>ಕುಂದಗೋಳ ತಾಲ್ಲೂಕಿನ ಗುಡಗೇರಿ ಗ್ರಾಮದವರಾದ ಶ್ರೀಧರ ಬಿಂಜಡಗಿ, ಹೇಮಂತ ಧರೆಣ್ಣವರ ಮತ್ತು ಗೆಬಿ ಫರ್ನಾಂಡೀಸ್ ಬಂಧಿತರು.</p><p>ತಾಲ್ಲೂಕಿನ ತಾರಿಹಾಳ ಗ್ರಾಮದ ಸೈದುಸಾಬ ನದಾಫ್ ಅವರ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿದ್ದರು. ಅದೇ ರೀತಿ ಅಂಚಗೇರಿ ಗ್ರಾಮದ ಗೋಡಾವನ್ ಆಶ್ರಯ ಬಡಾವಣೆಯಲ್ಲಿನ ಮಂಜುನಾಥ ಜಗಲಾರ ಅವರ ಮನೆಯಲ್ಲಿ ಇಟ್ಟಿದ್ದ ₹₹1.42 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದರು. ಪ್ರಕರಣ ದಾಖಲಾಗಿತ್ತು.</p><p>ಇನ್ಸ್ಪೆಕ್ಟರ್ ಮುರಗೇಶ ಚಣ್ಣನವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಪಿಎಸ್ಐ ಸಚಿನ್ ಆಲಮೇಲಕರ್, ಎಎಸ್ಐ ಎನ್.ಎಂ. ಹೊನ್ನಪ್ಪನವರ, ಸಿಬ್ಬಂದಿ ಎ.ಎ. ಕಾಕರ್, ಎಚ್.ಬಿ . ಐಹೋಳೆ, ಎಚ್.ಎಲ್. ಮಲ್ಲಿಗವಾಡ, ಸಂತೋಷ ಚವ್ಹಾಣ, ಚನ್ನಪ್ಪ ಬಳ್ಕೊಳ್ಳಿ, ಮಹಾಂತೇಶ ಮದ್ದಿನ್, ಗಿರೀಶ ತಿಪ್ಪಣ್ಣವರ, ವಿಶ್ವನಾಥ ಬಡಿಗೇರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ತಾಲ್ಲೂಕಿನ ವಿವಿಧೆಡೆ ಮನೆಗಳ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಗ್ರಾಮೀಣ ಠಾಣೆ ಪೊಲೀಸರು, ₹9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.</p><p>ಕುಂದಗೋಳ ತಾಲ್ಲೂಕಿನ ಗುಡಗೇರಿ ಗ್ರಾಮದವರಾದ ಶ್ರೀಧರ ಬಿಂಜಡಗಿ, ಹೇಮಂತ ಧರೆಣ್ಣವರ ಮತ್ತು ಗೆಬಿ ಫರ್ನಾಂಡೀಸ್ ಬಂಧಿತರು.</p><p>ತಾಲ್ಲೂಕಿನ ತಾರಿಹಾಳ ಗ್ರಾಮದ ಸೈದುಸಾಬ ನದಾಫ್ ಅವರ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿದ್ದರು. ಅದೇ ರೀತಿ ಅಂಚಗೇರಿ ಗ್ರಾಮದ ಗೋಡಾವನ್ ಆಶ್ರಯ ಬಡಾವಣೆಯಲ್ಲಿನ ಮಂಜುನಾಥ ಜಗಲಾರ ಅವರ ಮನೆಯಲ್ಲಿ ಇಟ್ಟಿದ್ದ ₹₹1.42 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದರು. ಪ್ರಕರಣ ದಾಖಲಾಗಿತ್ತು.</p><p>ಇನ್ಸ್ಪೆಕ್ಟರ್ ಮುರಗೇಶ ಚಣ್ಣನವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಪಿಎಸ್ಐ ಸಚಿನ್ ಆಲಮೇಲಕರ್, ಎಎಸ್ಐ ಎನ್.ಎಂ. ಹೊನ್ನಪ್ಪನವರ, ಸಿಬ್ಬಂದಿ ಎ.ಎ. ಕಾಕರ್, ಎಚ್.ಬಿ . ಐಹೋಳೆ, ಎಚ್.ಎಲ್. ಮಲ್ಲಿಗವಾಡ, ಸಂತೋಷ ಚವ್ಹಾಣ, ಚನ್ನಪ್ಪ ಬಳ್ಕೊಳ್ಳಿ, ಮಹಾಂತೇಶ ಮದ್ದಿನ್, ಗಿರೀಶ ತಿಪ್ಪಣ್ಣವರ, ವಿಶ್ವನಾಥ ಬಡಿಗೇರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>