<p><strong>ಹುಬ್ಬಳ್ಳಿ</strong>: ನಗರದ ಕುಸಗಲ್ ರಸ್ತೆಯ ಮೈದಾನದಲ್ಲಿ ಸಂಸದರ ಸಾಂಸ್ಕೃತಿಕ ಮಹೋತ್ಸವದ ಪ್ರಯುಕ್ತ ಎರಡು ದಿನ ನಡೆದ ‘ಹುಬ್ಬಳ್ಳಿ ಅಂತರರಾಷ್ಟ್ರೀಯ ಗಾಳಿಪಟ ಹಾಗೂ ಸಾಂಸ್ಕೃತಿಕ ಉತ್ಸವ’ಕ್ಕೆ ಭಾನುವಾರ ಅದ್ದೂರಿಯಾಗಿ ಸಂಪನ್ನಗೊಂಡಿತು.</p>.<p>ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ನಡೆದ ಉತ್ಸವದಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಪಟುಗಳು ವೈವಿಧ್ಯಮಯ ಗಾಳಿಪಟ ಹಾರಿಸಿ ಸಂಭ್ರಮಿಸಿದರು. ಹಗ್ಗಜಗ್ಗಾಟ, ಗೋಣಿಚೀಲ ಕಟ್ಟಿಕೊಂಡು ಜಿಗಿತ, ಲಗೋರಿ, ಬುಗುರಿ, ಚಿನ್ನಿ-ದಾಂಡು ಸೇರಿದಂತೆ ವಿವಿಧ ದೇಸಿ ಕ್ರೀಡೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಭಾನುವಾರ ಸಂಜೆ ನಡೆದ ಮನರಂಜನೆ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಹುಬ್ಬಳ್ಳಿಯ ಬಾಲ ಕಲಾವಿದೆ ಮಹನ್ಯಾ ಪಾಟೀಲ ಜೊತೆ ಕೇಂದ್ರ ಸಚಿವ ಪ್ರಹ್ಲಾದ ಜೊಶಿ ಅವರು, ‘ಕಾಣದಂತೆ ಮಾಯವಾದನೋ, ನಮ್ಮ ಶಿವ’ ಹಾಡು ಹಾಡಿ ಸಂಭ್ರಮಿಸಿದರು.</p>.<p>ಸೋನು ನಿಗಮ್ ಹಾಗೂ ಅವರ ತಂಡದಿಂದ ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಪ್ರೇಕ್ಷಕರನ್ನು ಮನಸೂರೆಗೊಳಿಸಿತು. ಮುಂಗಾರು ಮಳೆ, ಮಾಯಾವಿ ಸೇರಿದಂತೆ ಹಲವು ಹಾಡುಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ನಗರದ ಕುಸಗಲ್ ರಸ್ತೆಯ ಮೈದಾನದಲ್ಲಿ ಸಂಸದರ ಸಾಂಸ್ಕೃತಿಕ ಮಹೋತ್ಸವದ ಪ್ರಯುಕ್ತ ಎರಡು ದಿನ ನಡೆದ ‘ಹುಬ್ಬಳ್ಳಿ ಅಂತರರಾಷ್ಟ್ರೀಯ ಗಾಳಿಪಟ ಹಾಗೂ ಸಾಂಸ್ಕೃತಿಕ ಉತ್ಸವ’ಕ್ಕೆ ಭಾನುವಾರ ಅದ್ದೂರಿಯಾಗಿ ಸಂಪನ್ನಗೊಂಡಿತು.</p>.<p>ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ನಡೆದ ಉತ್ಸವದಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಪಟುಗಳು ವೈವಿಧ್ಯಮಯ ಗಾಳಿಪಟ ಹಾರಿಸಿ ಸಂಭ್ರಮಿಸಿದರು. ಹಗ್ಗಜಗ್ಗಾಟ, ಗೋಣಿಚೀಲ ಕಟ್ಟಿಕೊಂಡು ಜಿಗಿತ, ಲಗೋರಿ, ಬುಗುರಿ, ಚಿನ್ನಿ-ದಾಂಡು ಸೇರಿದಂತೆ ವಿವಿಧ ದೇಸಿ ಕ್ರೀಡೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಭಾನುವಾರ ಸಂಜೆ ನಡೆದ ಮನರಂಜನೆ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಹುಬ್ಬಳ್ಳಿಯ ಬಾಲ ಕಲಾವಿದೆ ಮಹನ್ಯಾ ಪಾಟೀಲ ಜೊತೆ ಕೇಂದ್ರ ಸಚಿವ ಪ್ರಹ್ಲಾದ ಜೊಶಿ ಅವರು, ‘ಕಾಣದಂತೆ ಮಾಯವಾದನೋ, ನಮ್ಮ ಶಿವ’ ಹಾಡು ಹಾಡಿ ಸಂಭ್ರಮಿಸಿದರು.</p>.<p>ಸೋನು ನಿಗಮ್ ಹಾಗೂ ಅವರ ತಂಡದಿಂದ ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಪ್ರೇಕ್ಷಕರನ್ನು ಮನಸೂರೆಗೊಳಿಸಿತು. ಮುಂಗಾರು ಮಳೆ, ಮಾಯಾವಿ ಸೇರಿದಂತೆ ಹಲವು ಹಾಡುಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>