<p><strong>ಹುಬ್ಬಳ್ಳಿ:</strong> ನಗರದ ಹೊಸೂರು ಕ್ರಾಸ್ ಬಳಿಯ ಜೈನ ಮಂದಿರದಲ್ಲಿ ಮಂಗಳವಾರ ರಾತ್ರಿ ಕಳ್ಳರು ಮೂರ್ತಿ, ನಗದು ಸೇರಿದಂತೆ ₹4.50 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.</p>.<p>ಮಂದಿರಲ್ಲಿದ್ದ ಮೂರ್ತಿಗಳ ಮೇಲಿದ್ದ ಕಿರೀಟ, ಎರಡು ಚಕ್ರ, ಆರತಿ ತಟ್ಟೆ, ಹುಂಡಿಯಲ್ಲಿದ್ದ ಹಣ ದೋಚಲಾಗಿದೆ. ಕಳ್ಳರ ಚಲನವಲನಗಳು ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<p>ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದಿಂದ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಉತ್ತರ ವಿಭಾಗದ ಎಸಿಪಿ ಶಿವಾನಂದ ಚಲವಾದಿ, ಜೈನ ಸಮುದಾಯದವರಿಂದ ಘಟನೆ ಕುರಿತು ಮಾಹಿತಿ ಪಡೆದರು. ಈ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬೈಕ್ ಕಳವು; ಆರೋಪಿ ಬಂಧನ: ಬೈಕ್ಗಳ ಸರಣಿ ಕಳವು ಪ್ರಕರಣವನ್ನು ಭೇದಿಸಿರುವ ವಿದ್ಯಾನಗರ ಠಾಣೆ ಪೊಲೀಸರು, ಆರೋಪಿ, ಭೈರಿದೇವರಕೊಪ್ಪದ ನಿವಾಸಿ ಪ್ರಕಾಶ ಪರಸನ್ನವರ ಎಂಬಾತನನ್ನು ಬಂಧಿಸಿದ್ದಾರೆ.</p>.<p>ಆರೋಪಿಯಿಂದ ₹9 ಲಕ್ಷ ಮೌಲ್ಯದ 7 ಯಮಹಾ ಆರ್ಎಕ್ಸ್–100 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೇಶ್ವಾಪುರ, ನವನಗರ ಸೇರಿ ಹಲವೆಡೆ ಕಳವು ಮಾಡಿದ್ದ. ಅಲ್ಲದೆ, ದಾಂಡೇಲಿಯಲ್ಲಿಯೂ ಬೈಕ್ ಕಳವು ಮಾಡಿರುವುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಲೆ ಯತ್ನ; ಪ್ರಕರಣ ದಾಖಲು: ತಾಯಿಯ ಮೇಲೆ ಸಂಶಯಪಡುತ್ತಿದ್ದ ಕಾರಣಕ್ಕೆ ಮಕ್ಕಳು ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಭೈರಿದೇವರಕೊಪ್ಪದಲ್ಲಿ ನಡೆದಿದ್ದು, ನವನಗರ ಎಂಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಿಂಗಪ್ಪ ಕುರುಬರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಪತ್ನಿ ಶೋಭಾ, ಮಕ್ಕಳಾದ ಮನು ಹಾಗೂ ಮೇಘಾ ಎಂಬುವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-22-1906959520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಗರದ ಹೊಸೂರು ಕ್ರಾಸ್ ಬಳಿಯ ಜೈನ ಮಂದಿರದಲ್ಲಿ ಮಂಗಳವಾರ ರಾತ್ರಿ ಕಳ್ಳರು ಮೂರ್ತಿ, ನಗದು ಸೇರಿದಂತೆ ₹4.50 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.</p>.<p>ಮಂದಿರಲ್ಲಿದ್ದ ಮೂರ್ತಿಗಳ ಮೇಲಿದ್ದ ಕಿರೀಟ, ಎರಡು ಚಕ್ರ, ಆರತಿ ತಟ್ಟೆ, ಹುಂಡಿಯಲ್ಲಿದ್ದ ಹಣ ದೋಚಲಾಗಿದೆ. ಕಳ್ಳರ ಚಲನವಲನಗಳು ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<p>ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದಿಂದ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಉತ್ತರ ವಿಭಾಗದ ಎಸಿಪಿ ಶಿವಾನಂದ ಚಲವಾದಿ, ಜೈನ ಸಮುದಾಯದವರಿಂದ ಘಟನೆ ಕುರಿತು ಮಾಹಿತಿ ಪಡೆದರು. ಈ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಬೈಕ್ ಕಳವು; ಆರೋಪಿ ಬಂಧನ: ಬೈಕ್ಗಳ ಸರಣಿ ಕಳವು ಪ್ರಕರಣವನ್ನು ಭೇದಿಸಿರುವ ವಿದ್ಯಾನಗರ ಠಾಣೆ ಪೊಲೀಸರು, ಆರೋಪಿ, ಭೈರಿದೇವರಕೊಪ್ಪದ ನಿವಾಸಿ ಪ್ರಕಾಶ ಪರಸನ್ನವರ ಎಂಬಾತನನ್ನು ಬಂಧಿಸಿದ್ದಾರೆ.</p>.<p>ಆರೋಪಿಯಿಂದ ₹9 ಲಕ್ಷ ಮೌಲ್ಯದ 7 ಯಮಹಾ ಆರ್ಎಕ್ಸ್–100 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೇಶ್ವಾಪುರ, ನವನಗರ ಸೇರಿ ಹಲವೆಡೆ ಕಳವು ಮಾಡಿದ್ದ. ಅಲ್ಲದೆ, ದಾಂಡೇಲಿಯಲ್ಲಿಯೂ ಬೈಕ್ ಕಳವು ಮಾಡಿರುವುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಲೆ ಯತ್ನ; ಪ್ರಕರಣ ದಾಖಲು: ತಾಯಿಯ ಮೇಲೆ ಸಂಶಯಪಡುತ್ತಿದ್ದ ಕಾರಣಕ್ಕೆ ಮಕ್ಕಳು ತಂದೆಯ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಭೈರಿದೇವರಕೊಪ್ಪದಲ್ಲಿ ನಡೆದಿದ್ದು, ನವನಗರ ಎಂಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಿಂಗಪ್ಪ ಕುರುಬರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಪತ್ನಿ ಶೋಭಾ, ಮಕ್ಕಳಾದ ಮನು ಹಾಗೂ ಮೇಘಾ ಎಂಬುವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-22-1906959520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>