<p><strong>ಹುಬ್ಬಳ್ಳಿ</strong>: ‘ನಗರದ ಕೆಜಿಪಿ ಫೌಂಡೇಶನ್ ವತಿಯಿಂದ ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮೇ 31ರಂದು ಬೆಳಿಗ್ಗೆ 9ರಿಂದ ಸಂಜೆ 4ರ ತನಕ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ’ ಎಂದು ಫೌಂಡೇಶನ್ನ ಪ್ರಮುಖ ರಾಜುಪಾಟೀಲ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಗಣೇಶ ಶೇಟ್ ಅವರ ನೇತೃತ್ವದಲ್ಲಿ 2ನೇ ಬಾರಿಗೆ ರಾಜ್ಯಮಟ್ಟದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ 100ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರು ಮೇಳದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಅಧ್ಯಯನ ಮಾಡಿದ ಯುವಕ, ಯುವತಿಯರು ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗವಹಿಸಬಹುದು. 3 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. 900ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ವಿಕಲಚೇತನರೂ ಸಹ ಭಾಗವಹಿಸಬಹುದು‘ ಎಂದು ಹೇಳಿದರು.</p>.<p>‘ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಪ್ರಸಾದ ಅಬ್ಬಯ್ಯ, ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಂಜುನಾಥ ಮುನವಳ್ಳಿ ಅವರು ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು‘ ಎಂದು ತಿಳಿಸಿದರು.</p>.<p>ನಾಗರಾಜ ಸೋಗಿ, ವಿನಾಯಕ ಕಿತ್ತೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1058329380</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ನಗರದ ಕೆಜಿಪಿ ಫೌಂಡೇಶನ್ ವತಿಯಿಂದ ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮೇ 31ರಂದು ಬೆಳಿಗ್ಗೆ 9ರಿಂದ ಸಂಜೆ 4ರ ತನಕ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ’ ಎಂದು ಫೌಂಡೇಶನ್ನ ಪ್ರಮುಖ ರಾಜುಪಾಟೀಲ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಗಣೇಶ ಶೇಟ್ ಅವರ ನೇತೃತ್ವದಲ್ಲಿ 2ನೇ ಬಾರಿಗೆ ರಾಜ್ಯಮಟ್ಟದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ 100ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರು ಮೇಳದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಅಧ್ಯಯನ ಮಾಡಿದ ಯುವಕ, ಯುವತಿಯರು ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗವಹಿಸಬಹುದು. 3 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. 900ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ವಿಕಲಚೇತನರೂ ಸಹ ಭಾಗವಹಿಸಬಹುದು‘ ಎಂದು ಹೇಳಿದರು.</p>.<p>‘ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಪ್ರಸಾದ ಅಬ್ಬಯ್ಯ, ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಂಜುನಾಥ ಮುನವಳ್ಳಿ ಅವರು ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು‘ ಎಂದು ತಿಳಿಸಿದರು.</p>.<p>ನಾಗರಾಜ ಸೋಗಿ, ವಿನಾಯಕ ಕಿತ್ತೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1058329380</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>