<p>ಹುಬ್ಬಳ್ಳಿ: ತಾಲ್ಲೂಕಿನ ಕೋಳಿವಾಡ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದ್ದು, ಕುಸಿದು ಬಿದ್ದು, ಅಪಾಯ ಸಂಭವಿಸುವ ಸಾಧ್ಯತೆ ಇದೆ.</p>.<p>1986ರಲ್ಲಿ ತಂಗುದಾಣವನ್ನು ನಿರ್ಮಿಸಲಾಗಿದೆ. ಈಗ ಅದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ಜನರು ಅದರ ಒಳಗೆ ಹೋಗಲು ಭಯಪಡುವಂತಾಗಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇದರ ಪುನರ್ನಿರ್ಮಾಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ದೂರು.</p>.<p>ತಂಗುದಾಣ ಹಾಳಾಗಿರುವುದರಿಂದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ, ಬಿಸಿಲಿನಲ್ಲೇ ನಿಂತು ಬಸ್ಗಾಗಿ ಕಾಯಬೇಕಾದ ಸ್ಥಿತಿ ಇದೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ತಂಗುದಾಣವನ್ನು ಪುನರ್ನಿರ್ಮಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ತಂಗುದಾಣ ಪುನರ್ ನಿರ್ಮಾಣಕ್ಕೆ ಅಗತ್ಯವಿರುವಷ್ಟು ಅನುದಾನ ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿಲ್ಲ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಥವಾ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಬೇಕು’ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ತಿಳಿಸಿದರು.</p>.<p>‘ಹೊಸ ತಂಗುದಾಣ ನಿರ್ಮಾಣಕ್ಕೆ ಕೆಲ ತಿಂಗಳ ಹಿಂದೆ ಮೇಲಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈಗಿರುವ ತಂಗುದಾಣ ಚಿಕ್ಕದಾಗಿದ್ದು, ಬೇರೆ ಕಡೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-24-507949429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ತಾಲ್ಲೂಕಿನ ಕೋಳಿವಾಡ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದ್ದು, ಕುಸಿದು ಬಿದ್ದು, ಅಪಾಯ ಸಂಭವಿಸುವ ಸಾಧ್ಯತೆ ಇದೆ.</p>.<p>1986ರಲ್ಲಿ ತಂಗುದಾಣವನ್ನು ನಿರ್ಮಿಸಲಾಗಿದೆ. ಈಗ ಅದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ಜನರು ಅದರ ಒಳಗೆ ಹೋಗಲು ಭಯಪಡುವಂತಾಗಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇದರ ಪುನರ್ನಿರ್ಮಾಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ದೂರು.</p>.<p>ತಂಗುದಾಣ ಹಾಳಾಗಿರುವುದರಿಂದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ, ಬಿಸಿಲಿನಲ್ಲೇ ನಿಂತು ಬಸ್ಗಾಗಿ ಕಾಯಬೇಕಾದ ಸ್ಥಿತಿ ಇದೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ತಂಗುದಾಣವನ್ನು ಪುನರ್ನಿರ್ಮಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ತಂಗುದಾಣ ಪುನರ್ ನಿರ್ಮಾಣಕ್ಕೆ ಅಗತ್ಯವಿರುವಷ್ಟು ಅನುದಾನ ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿಲ್ಲ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಥವಾ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಬೇಕು’ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ತಿಳಿಸಿದರು.</p>.<p>‘ಹೊಸ ತಂಗುದಾಣ ನಿರ್ಮಾಣಕ್ಕೆ ಕೆಲ ತಿಂಗಳ ಹಿಂದೆ ಮೇಲಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈಗಿರುವ ತಂಗುದಾಣ ಚಿಕ್ಕದಾಗಿದ್ದು, ಬೇರೆ ಕಡೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-24-507949429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>