<p><strong>ಹುಬ್ಬಳ್ಳಿ</strong>: ಮೇಲ್ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ನಾಲ್ಕೂವರೆ ತಿಂಗಳಿನಿಂದ ಸ್ಥಗಿತವಾಗಿದ್ದ ಇಲ್ಲಿನ ಉಪನಗರ ಕೇಂದ್ರ(ಹಳೇ) ಬಸ್ ನಿಲ್ದಾಣ ಬುಧವಾರದಿಂದ (ಸೆಪ್ಟೆಂಬರ್ 3) ಪುನರಾರಂಭವಾಗಲಿದೆ. ಚನ್ನಮ್ಮ ವೃತ್ತದಿಂದ ಬಸವ ವನದವರೆಗೆ ಬಂದ್ ಮಾಡಲಾಗಿದ್ದ ರಸ್ತೆ ಸಹ ಸಾರ್ವಜನಿಕರಿಗೆ ಮುಕ್ತವಾಗಲಿದೆ.</p>.<p>ಮೇಲ್ಸೇತುವೆಯ ತ್ವರಿತ ಕಾಮಗಾರಿಗಾಗಿ ಏ. 20ರಿಂದ ಬಸ್ ನಿಲ್ದಾಣ ಸೇರಿ ಅದರ ಎದುರಿನ ರಸ್ತೆ ಮತ್ತು ಚನ್ನಮ್ಮ ವೃತ್ತದಿಂದ ಹಳೇಕೋರ್ಟ್ವರೆಗಿನ ರಸ್ತೆ ಬಂದ್ ಮಾಡಲಾಗಿತ್ತು. ಈ ಭಾಗದಲ್ಲಿ ಅಪಾಯಕಾರಿ ಕಾಮಗಾರಿ ಮುಕ್ತಾಯವಾದ ಹಿನ್ನೆಲೆಯಲ್ಲಿ, ಬಸ್ ನಿಲ್ದಾಣ ಹಾಗೂ ಭಾಗಶಃ ರಸ್ತೆ ಮುಕ್ತಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.</p>.<p>ಬಸ್ಗಳ ಸಂಚಾರ ಹಾಗೂ ಪ್ರಯಾಣಿಕರ ಓಡಾಟವಿಲ್ಲದೆ ಬಸ್ ನಿಲ್ದಾಣದ ಆವರಣದಲ್ಲಿ ಕಸ, ಕಡ್ಡಿಗಳು ರಾಶಿ ಬಿದ್ದಿದ್ದವು. ನಿಲ್ದಾಣ ಪ್ರವೇಶಿಸುವ ದ್ವಾರದಲ್ಲಿ ಹುಲ್ಲು, ಗಿಡಗಳು ಬೆಳೆದಿದ್ದವು. ಆಸನಗಳೆಲ್ಲ ದೂಳಿನಿಂದ ಆವೃತವಾಗಿತ್ತು. ಸಾರಿಗೆ ಅಧಿಕಾರಿಗಳು ಮಂಗಳವಾರ ಕಾರ್ಮಿಕರ ನೆರವಿನಿಂದ ನಿಲ್ದಾಣ ಶುಚಿಗೊಳಿಸಿದರು.</p>.<p>ಇದರ ಕುರಿತು ವಿವರಣೆ ನೀಡಿದ ಹುಬ್ಬಳ್ಳಿ ನಗರ ವಿಭಾಗೀಯ ಸಾರಿಗೆ ಅಧಿಕಾರಿ ಸಿದ್ಧೇಶ್ವರ, ‘ನೂತನ ನಿಲ್ದಾಣ ಆರಂಭವಾದ ಮೂರು ತಿಂಗಳಲ್ಲೇ ಸ್ಥಗಿತವಾಗಿ, ಪ್ರಯಾಣಿಕರಿಗೆ ಸಮಸ್ಯೆಯಾಗಿತ್ತು. ಇದೀಗ ಪುನರಾರಂಭಕ್ಕೆ ಅನುಮತಿ ಸಿಕ್ಕಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಿಲ್ದಾಣದಿಂದ ನಗರದ ವಿವಿಧೆಡೆ ಪ್ರತಿದಿನ ಮೂರು ಸಾವಿರ ಮಾರ್ಗಸೂಚಿಯಲ್ಲಿ ಬಸ್ಗಳು ಸಂಚರಿಸುತ್ತವೆ’ ಎಂದರು.</p>.<div><blockquote>ಬುಧವಾರ ಬೆಳಿಗ್ಗೆಯಿಂದಲೇ ಬಸ್ಗಳ ಸಂಚಾರ ಆರಂಭವಾಗಲಿದೆ. ಹಂತಹಂತವಾಗಿ ಬಸ್ಗಳನ್ನು ಓಡಿಸಿ ಸಂಜೆ ವೇಳೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ.</blockquote><span class="attribution"> ಸಿದ್ದೇಶ್ವರ, ಸಾರಿಗೆ ಅಧಿಕಾರಿ. ಹುಬ್ಬಳ್ಳಿ ನಗರ ವಿಭಾಗ</span></div>.<p>‘ಚನ್ನಮ್ಮ ವೃತ್ತದಿಂದ ಹುಬ್ಬಳ್ಳಿ ಆಪ್ಟಿಕಲ್ಸ್ವರೆಗೆ ಮಾತ್ರ ರಸ್ತೆ ಮುಕ್ತವಾಗಲಿದ್ದು, ಈ ಭಾಗದಲ್ಲಿ ಹೊಂಡ ಬಿದ್ದ ರಸ್ತೆಯನ್ನು ತಾತ್ಕಾಲಿಕವಾಗಿ ಕಡಿ ಹಾಗೂ ಸಿಮೆಂಟ್ನಿಂದ ಮುಚ್ಚಲಾಗಿದೆ. ದೂಳು ಏಳುವುದರಿಂದ ಆಗಾಗ ನೀರು ಸಿಂಪಡಿಸಲು ತೀರ್ಮಾನಿಸಲಾಗಿದೆ. ಕಾಮಗಾರಿ ನಡೆಯುವ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿದ್ದೇವೆ’ ಎಂದು ರಾಷ್ಟ್ರೀಯ ಹೆದ್ದಾರಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸತೀಶ ನಾಗನೂರು ತಿಳಿಸಿದರು.</p>.<p>‘ಬಸ್ಗಳ ಸುಗಮ ಸಂಚಾರಕ್ಕೆ ನಿಲ್ದಾಣದ ಎಡಗಡೆಯ ಪ್ರವೇಶದ್ವಾರದ ಪಕ್ಕದಲ್ಲಿ ಇರುವ ಶೆಡ್ ತೆರವು ಮಾಡಲು ನಿರ್ಧರಿಸಲಾಗಿತ್ತು. ಖಾಸಗಿ ಆಸ್ತಿಯಾಗಿರುವುದರಿಂದ ಪಾಲಿಕೆ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ ತೀರ್ಮಾ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಮೇಲ್ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ನಾಲ್ಕೂವರೆ ತಿಂಗಳಿನಿಂದ ಸ್ಥಗಿತವಾಗಿದ್ದ ಇಲ್ಲಿನ ಉಪನಗರ ಕೇಂದ್ರ(ಹಳೇ) ಬಸ್ ನಿಲ್ದಾಣ ಬುಧವಾರದಿಂದ (ಸೆಪ್ಟೆಂಬರ್ 3) ಪುನರಾರಂಭವಾಗಲಿದೆ. ಚನ್ನಮ್ಮ ವೃತ್ತದಿಂದ ಬಸವ ವನದವರೆಗೆ ಬಂದ್ ಮಾಡಲಾಗಿದ್ದ ರಸ್ತೆ ಸಹ ಸಾರ್ವಜನಿಕರಿಗೆ ಮುಕ್ತವಾಗಲಿದೆ.</p>.<p>ಮೇಲ್ಸೇತುವೆಯ ತ್ವರಿತ ಕಾಮಗಾರಿಗಾಗಿ ಏ. 20ರಿಂದ ಬಸ್ ನಿಲ್ದಾಣ ಸೇರಿ ಅದರ ಎದುರಿನ ರಸ್ತೆ ಮತ್ತು ಚನ್ನಮ್ಮ ವೃತ್ತದಿಂದ ಹಳೇಕೋರ್ಟ್ವರೆಗಿನ ರಸ್ತೆ ಬಂದ್ ಮಾಡಲಾಗಿತ್ತು. ಈ ಭಾಗದಲ್ಲಿ ಅಪಾಯಕಾರಿ ಕಾಮಗಾರಿ ಮುಕ್ತಾಯವಾದ ಹಿನ್ನೆಲೆಯಲ್ಲಿ, ಬಸ್ ನಿಲ್ದಾಣ ಹಾಗೂ ಭಾಗಶಃ ರಸ್ತೆ ಮುಕ್ತಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.</p>.<p>ಬಸ್ಗಳ ಸಂಚಾರ ಹಾಗೂ ಪ್ರಯಾಣಿಕರ ಓಡಾಟವಿಲ್ಲದೆ ಬಸ್ ನಿಲ್ದಾಣದ ಆವರಣದಲ್ಲಿ ಕಸ, ಕಡ್ಡಿಗಳು ರಾಶಿ ಬಿದ್ದಿದ್ದವು. ನಿಲ್ದಾಣ ಪ್ರವೇಶಿಸುವ ದ್ವಾರದಲ್ಲಿ ಹುಲ್ಲು, ಗಿಡಗಳು ಬೆಳೆದಿದ್ದವು. ಆಸನಗಳೆಲ್ಲ ದೂಳಿನಿಂದ ಆವೃತವಾಗಿತ್ತು. ಸಾರಿಗೆ ಅಧಿಕಾರಿಗಳು ಮಂಗಳವಾರ ಕಾರ್ಮಿಕರ ನೆರವಿನಿಂದ ನಿಲ್ದಾಣ ಶುಚಿಗೊಳಿಸಿದರು.</p>.<p>ಇದರ ಕುರಿತು ವಿವರಣೆ ನೀಡಿದ ಹುಬ್ಬಳ್ಳಿ ನಗರ ವಿಭಾಗೀಯ ಸಾರಿಗೆ ಅಧಿಕಾರಿ ಸಿದ್ಧೇಶ್ವರ, ‘ನೂತನ ನಿಲ್ದಾಣ ಆರಂಭವಾದ ಮೂರು ತಿಂಗಳಲ್ಲೇ ಸ್ಥಗಿತವಾಗಿ, ಪ್ರಯಾಣಿಕರಿಗೆ ಸಮಸ್ಯೆಯಾಗಿತ್ತು. ಇದೀಗ ಪುನರಾರಂಭಕ್ಕೆ ಅನುಮತಿ ಸಿಕ್ಕಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಿಲ್ದಾಣದಿಂದ ನಗರದ ವಿವಿಧೆಡೆ ಪ್ರತಿದಿನ ಮೂರು ಸಾವಿರ ಮಾರ್ಗಸೂಚಿಯಲ್ಲಿ ಬಸ್ಗಳು ಸಂಚರಿಸುತ್ತವೆ’ ಎಂದರು.</p>.<div><blockquote>ಬುಧವಾರ ಬೆಳಿಗ್ಗೆಯಿಂದಲೇ ಬಸ್ಗಳ ಸಂಚಾರ ಆರಂಭವಾಗಲಿದೆ. ಹಂತಹಂತವಾಗಿ ಬಸ್ಗಳನ್ನು ಓಡಿಸಿ ಸಂಜೆ ವೇಳೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ.</blockquote><span class="attribution"> ಸಿದ್ದೇಶ್ವರ, ಸಾರಿಗೆ ಅಧಿಕಾರಿ. ಹುಬ್ಬಳ್ಳಿ ನಗರ ವಿಭಾಗ</span></div>.<p>‘ಚನ್ನಮ್ಮ ವೃತ್ತದಿಂದ ಹುಬ್ಬಳ್ಳಿ ಆಪ್ಟಿಕಲ್ಸ್ವರೆಗೆ ಮಾತ್ರ ರಸ್ತೆ ಮುಕ್ತವಾಗಲಿದ್ದು, ಈ ಭಾಗದಲ್ಲಿ ಹೊಂಡ ಬಿದ್ದ ರಸ್ತೆಯನ್ನು ತಾತ್ಕಾಲಿಕವಾಗಿ ಕಡಿ ಹಾಗೂ ಸಿಮೆಂಟ್ನಿಂದ ಮುಚ್ಚಲಾಗಿದೆ. ದೂಳು ಏಳುವುದರಿಂದ ಆಗಾಗ ನೀರು ಸಿಂಪಡಿಸಲು ತೀರ್ಮಾನಿಸಲಾಗಿದೆ. ಕಾಮಗಾರಿ ನಡೆಯುವ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿದ್ದೇವೆ’ ಎಂದು ರಾಷ್ಟ್ರೀಯ ಹೆದ್ದಾರಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸತೀಶ ನಾಗನೂರು ತಿಳಿಸಿದರು.</p>.<p>‘ಬಸ್ಗಳ ಸುಗಮ ಸಂಚಾರಕ್ಕೆ ನಿಲ್ದಾಣದ ಎಡಗಡೆಯ ಪ್ರವೇಶದ್ವಾರದ ಪಕ್ಕದಲ್ಲಿ ಇರುವ ಶೆಡ್ ತೆರವು ಮಾಡಲು ನಿರ್ಧರಿಸಲಾಗಿತ್ತು. ಖಾಸಗಿ ಆಸ್ತಿಯಾಗಿರುವುದರಿಂದ ಪಾಲಿಕೆ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ ತೀರ್ಮಾ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>