ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಮೋದಿ‌ ನೋಡುವ ಕಾತರದಲ್ಲಿ‌ ಜನ

ಮಧ್ಯಾಹ್ನ 3.30ಕ್ಕೆ  ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ
Last Updated 12 ಜನವರಿ 2023, 9:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ರೈಲ್ವೆ ಮೈದಾನದಲ್ಲಿ ಇಂದು ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗಾಗಿ ನಗರಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕೊಳ್ಳಲು‌ ಜನ ಕಾತರದಿಂದ ಕಾಯುತ್ತಿದ್ದಾರೆ.

ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30ಕ್ಕೆ ಬಂದಿಳಿಯಲಿರುವ ಮೋದಿ ಅವರು, ನಿಲ್ದಾಣದಿಂದ ಗೋಕುಲ ರಸ್ತೆ ಮಾರ್ಗವಾಗಿ ರೈಲ್ವೆ ಮೈದಾನಕ್ಕೆ ತೆರಳಿದ್ದಾರೆ. ಈ ವೇಳೆ ಜನರು ರಸ್ತೆ ಬದಿ ನಿಂತು, ಮೋದಿ ಅವರನ್ನು ನೋಡುವುದಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ, ರಸ್ತೆಯ ಎರಡೂ ಬದಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ. ಮುಖ್ಯ ರಸ್ತೆಯನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ರಸ್ತೆಯ ಎರಡೂ ಬದಿ ಹಾಕಿರುವ ಬ್ಯಾರಿಕೇಡ್ ಗಳ ಬಳಿ ಜನ ಜಮಾಯಿಸುತ್ತಿದ್ದಾರೆ. ಮೋದಿ ಭಾವಚಿತ್ರವನ್ನು ಕೈಯಲ್ಲಿಡು "ಮೋದಿ, ಮೋದಿ, ಮೋದಿ" ಎಂದು‌‌ ಜೈಕಾರ ಹಾಕುತ್ತಾ ಮೋದಿ ಬರುವಿಕೆಗಾಗಿ ಕಾಯುತ್ತಿದ್ದಾರೆ. ಜನರು ರಸ್ತೆ ದಾಟದಂತೆ‌ ಪೊಲೀಸರು ತಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT