<p><strong>ಹುಬ್ಬಳ್ಳಿ: ‘</strong>ರಾಜ್ಯವನ್ನು ಮಾದಕ ವಸ್ತು ಮುಕ್ತವಾಗಿಸುವುದು ಸರ್ಕಾರದ ಮುಖ್ಯ ಗುರಿ. ಮಾದಕ ವಸ್ತು ಜಾಲವನ್ನು ಬೇರುಸಹಿತ ಕಿತ್ತುಹಾಕಲು ಪೊಲೀಸ್ ಇಲಾಖೆ ಕೈಗೊಳ್ಳುವ ಕಟ್ಟುನಿಟ್ಟಿನ ಕ್ರಮದ ಅರಿವು ಮೂಡಿಸುವುದೇ ಪೊಲೀಸ್ ರನ್ ಉದ್ದೇಶ’ ಎಂದು ಜಿಲ್ಲಾಧಿಕಾರಿ ಆರ್. ಸ್ನೇಹಲ್ ಹೇಳಿದರು.</p>.<p>ನಗರದ ತೋಳನಕೆರೆ ಬಳಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಮತ್ತು ಧಾರವಾಡ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಶೀರ್ಷಿಕೆಯಡಿ ಭಾನುವಾರ ಬೆಳಿಗ್ಗೆ ಆಯೋಜಿಸಿದ್ದ ‘ಪೊಲೀಸ್ ರನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಯುವ ಪೀಳಿಗೆಯನ್ನು ಮಾದಕ ವಸ್ತು ವ್ಯಸನದಿಂದ ರಕ್ಷಿಸುವುದು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆ’ ಎಂದರು.</p>.<p>‘ಫಿಟ್ನೆಸ್ ಫಾರ್ ಆಲ್’, ‘ಡ್ರಗ್ ಮುಕ್ತ ಕರ್ನಾಟಕ’ ಮತ್ತು ‘ಸೈಬರ್ ಕ್ರೈಂ ಜಾಗೃತಿ’ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಓಟದಲ್ಲಿ ನೂರಾರು ಜನರು ಭಾಗಿಯಾದರು. ‘ರಸ್ತೆ ಸುರಕ್ಷೆ ಜೀವನ ರಕ್ಷೆ’ ಎಂಬ ಘೋಷವಾಕ್ಯದಡಿ, 10 ಕಿ.ಮೀ. ಮತ್ತು 5 ಕಿ.ಮೀ. ವಿಭಾಗದ ಓಟಕ್ಕೆ ಬಲೂನ್ ಹಾರಿಸಿ ಚಾಲನೆ ನೀಡಲಾಯಿತು.</p>.<p>ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಡಿಸಿಪಿ ರವೀಶ್ ಸಿ.ಆರ್., ಉದ್ಯಮಿ ವಿ.ಎಸ್.ವಿ. ಪ್ರಸಾದ ಹಾಜರಿದ್ದರು.</p>.<p>ಚಿಕ್ಕ ಮಕ್ಕಳು, ಯುವಜನರು, ಮಹಿಳೆಯರು, ವಯಸ್ಕರು ಭಾಗವಹಿಸಿದ್ದರು. ವಿಜೇತರಿಗೆ ನಗದು ಬಹುಮಾನ, ಟ್ರೋಫಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ‘</strong>ರಾಜ್ಯವನ್ನು ಮಾದಕ ವಸ್ತು ಮುಕ್ತವಾಗಿಸುವುದು ಸರ್ಕಾರದ ಮುಖ್ಯ ಗುರಿ. ಮಾದಕ ವಸ್ತು ಜಾಲವನ್ನು ಬೇರುಸಹಿತ ಕಿತ್ತುಹಾಕಲು ಪೊಲೀಸ್ ಇಲಾಖೆ ಕೈಗೊಳ್ಳುವ ಕಟ್ಟುನಿಟ್ಟಿನ ಕ್ರಮದ ಅರಿವು ಮೂಡಿಸುವುದೇ ಪೊಲೀಸ್ ರನ್ ಉದ್ದೇಶ’ ಎಂದು ಜಿಲ್ಲಾಧಿಕಾರಿ ಆರ್. ಸ್ನೇಹಲ್ ಹೇಳಿದರು.</p>.<p>ನಗರದ ತೋಳನಕೆರೆ ಬಳಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಮತ್ತು ಧಾರವಾಡ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಶೀರ್ಷಿಕೆಯಡಿ ಭಾನುವಾರ ಬೆಳಿಗ್ಗೆ ಆಯೋಜಿಸಿದ್ದ ‘ಪೊಲೀಸ್ ರನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಯುವ ಪೀಳಿಗೆಯನ್ನು ಮಾದಕ ವಸ್ತು ವ್ಯಸನದಿಂದ ರಕ್ಷಿಸುವುದು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆ’ ಎಂದರು.</p>.<p>‘ಫಿಟ್ನೆಸ್ ಫಾರ್ ಆಲ್’, ‘ಡ್ರಗ್ ಮುಕ್ತ ಕರ್ನಾಟಕ’ ಮತ್ತು ‘ಸೈಬರ್ ಕ್ರೈಂ ಜಾಗೃತಿ’ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಓಟದಲ್ಲಿ ನೂರಾರು ಜನರು ಭಾಗಿಯಾದರು. ‘ರಸ್ತೆ ಸುರಕ್ಷೆ ಜೀವನ ರಕ್ಷೆ’ ಎಂಬ ಘೋಷವಾಕ್ಯದಡಿ, 10 ಕಿ.ಮೀ. ಮತ್ತು 5 ಕಿ.ಮೀ. ವಿಭಾಗದ ಓಟಕ್ಕೆ ಬಲೂನ್ ಹಾರಿಸಿ ಚಾಲನೆ ನೀಡಲಾಯಿತು.</p>.<p>ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಡಿಸಿಪಿ ರವೀಶ್ ಸಿ.ಆರ್., ಉದ್ಯಮಿ ವಿ.ಎಸ್.ವಿ. ಪ್ರಸಾದ ಹಾಜರಿದ್ದರು.</p>.<p>ಚಿಕ್ಕ ಮಕ್ಕಳು, ಯುವಜನರು, ಮಹಿಳೆಯರು, ವಯಸ್ಕರು ಭಾಗವಹಿಸಿದ್ದರು. ವಿಜೇತರಿಗೆ ನಗದು ಬಹುಮಾನ, ಟ್ರೋಫಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>