<p><strong>ಹುಬ್ಬಳ್ಳಿ:</strong> ‘ಲವ್ ಜಿಹಾದ್ ವಿರುದ್ಧ ದೇಶದಲ್ಲಿ ಕಠಿಣ ಕಾನೂನು ಜಾರಿಗೊಳಿಸಬೇಕು. ಮದರಸಾಗಳ ಮೇಲೆ ನಿಷೇಧ ಹೇರಬೇಕು. ವಿವಾಹ ನೋಂದಣಿ ನಿಯಮ ಬಿಗಿ ಆಗಬೇಕು’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲವ್ಜಿಹಾದ್, ಮತಾಂತರ ಹಾಗೂ ಅಪಹರಣದ ಮೂಲಕ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವ ಜಾಲ ಸಕ್ರಿಯವಾಗಿದೆ. ಈ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಒಪ್ಪಿಸಬೇಕು’ ಎಂದರು.</p>.<p>‘ಐಟಿ (ಮಾಹಿತಿ ತಂತ್ರಜ್ಞಾನ) ಕಂಪನಿಗಳಲ್ಲಿ ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ವಂಚಿಸುವ ಬಹುದೊಡ್ಡ ಜಾಲವಿದ್ದು, ಈ ಕುರಿತು ಶೀಘ್ರದಲ್ಲೇ ಗೃಹಸಚಿವರಿಗೆ ದಾಖಲೆ ಸಲ್ಲಿಸಲಾಗುತ್ತದೆ’ ಎಂದರು.</p>.<p>‘ದೇಶದಲ್ಲಿ ಹಿಂದೂ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂ ಸಮುದಾಯದ ಯುವಕರು ಪುಸಲಾಯಿಸಿ, ಮತಾಂತರ ಮಾಡುತ್ತಿದ್ದಾರೆ. ಇದಕ್ಕೆ ಅಪ್ರಾಪ್ತ ಮಕ್ಕಳೂ ಬಲಿಯಾಗಿದ್ದಾರೆ. ನಾಪತ್ತೆಯಾದ ಬಹುತೇಕ ಹೆಣ್ಣುಮಕ್ಕಳು ಇನ್ನೂ ಪತ್ತೆಯಾಗಿಲ್ಲ’ ಎಂದು <br>ತಿಳಿಸಿದರು.</p>.<p>‘ಲವ್ ಜಿಹಾದ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ಸಹ ಸತಾಯಿಸುತ್ತಾರೆ. ರಾಜಿ ಮಾಡಲು ಯತ್ನಿಸುತ್ತಾರೆ. ಕಾಂಗ್ರೆಸ್ ಸರ್ಕಾರ ಸಹ ಇಂತಹ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಲವ್ ಜಿಹಾದ್ ವಿರುದ್ಧ ದೇಶದಲ್ಲಿ ಕಠಿಣ ಕಾನೂನು ಜಾರಿಗೊಳಿಸಬೇಕು. ಮದರಸಾಗಳ ಮೇಲೆ ನಿಷೇಧ ಹೇರಬೇಕು. ವಿವಾಹ ನೋಂದಣಿ ನಿಯಮ ಬಿಗಿ ಆಗಬೇಕು’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲವ್ಜಿಹಾದ್, ಮತಾಂತರ ಹಾಗೂ ಅಪಹರಣದ ಮೂಲಕ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವ ಜಾಲ ಸಕ್ರಿಯವಾಗಿದೆ. ಈ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಒಪ್ಪಿಸಬೇಕು’ ಎಂದರು.</p>.<p>‘ಐಟಿ (ಮಾಹಿತಿ ತಂತ್ರಜ್ಞಾನ) ಕಂಪನಿಗಳಲ್ಲಿ ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ವಂಚಿಸುವ ಬಹುದೊಡ್ಡ ಜಾಲವಿದ್ದು, ಈ ಕುರಿತು ಶೀಘ್ರದಲ್ಲೇ ಗೃಹಸಚಿವರಿಗೆ ದಾಖಲೆ ಸಲ್ಲಿಸಲಾಗುತ್ತದೆ’ ಎಂದರು.</p>.<p>‘ದೇಶದಲ್ಲಿ ಹಿಂದೂ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂ ಸಮುದಾಯದ ಯುವಕರು ಪುಸಲಾಯಿಸಿ, ಮತಾಂತರ ಮಾಡುತ್ತಿದ್ದಾರೆ. ಇದಕ್ಕೆ ಅಪ್ರಾಪ್ತ ಮಕ್ಕಳೂ ಬಲಿಯಾಗಿದ್ದಾರೆ. ನಾಪತ್ತೆಯಾದ ಬಹುತೇಕ ಹೆಣ್ಣುಮಕ್ಕಳು ಇನ್ನೂ ಪತ್ತೆಯಾಗಿಲ್ಲ’ ಎಂದು <br>ತಿಳಿಸಿದರು.</p>.<p>‘ಲವ್ ಜಿಹಾದ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ಸಹ ಸತಾಯಿಸುತ್ತಾರೆ. ರಾಜಿ ಮಾಡಲು ಯತ್ನಿಸುತ್ತಾರೆ. ಕಾಂಗ್ರೆಸ್ ಸರ್ಕಾರ ಸಹ ಇಂತಹ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>