<p><strong>ಹುಬ್ಬಳ್ಳಿ</strong>: ‘ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದೊಂದೇ ಮುಖ್ಯವಲ್ಲ. ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಉದ್ಯಮಿ ಜಗದೀಶ ಹಿರೇಮಠ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನದಲ್ಲಿ ಹುಬ್ಬಳ್ಳಿ ಜಂಗಮ ಅಭಿವೃದ್ಧಿ ಸಂಘ, ದೀಕ್ಷಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಯಾವುದೇ ಕೆಲಸಕ್ಕೆ ಮುಂದಾದಾಗ ಸೋಲು ಎದುರಾಗುವುದು ಸಹಜ. ಸೋಲಿಗೆ ಎದೆಗುಂದದೆ ಸಾಧನೆಯತ್ತ ಮುನ್ನುಗ್ಗಬೇಕು. ಜೀವನದಲ್ಲಿ ಪ್ರಾಮಾಣಿಕತೆ, ಸಮಯಪಾಲನೆ, ವಿಶ್ವಾಸಾರ್ಹತೆ, ಸತತ ಪರಿಶ್ರಮ, ಶ್ರದ್ಧೆ ಮುಖ್ಯ. ಇವುಗಳಿದ್ದರೆ ಯಶಸ್ಸು, ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಕುಟುಂಬ ವ್ಯವಸ್ಥೆ ಕ್ರಮೇಣ ಹಾಳಾಗುತ್ತಿದೆ. ಸಂಸ್ಕೃತಿ, ಸಂಪ್ರದಾಯ ಉಳಿಸಿಕೊಂಡು ಹೋಗುವುದು ಇಂದಿನ ಅನಿವಾರ್ಯತೆ ಆಗಿದ್ದು, ಈ ದಿಕ್ಕಿನಲ್ಲಿ ಯುವಜನತೆ ಕಾರ್ಯಪ್ರವೃತ್ತರಾಗಬೇಕಿದೆ’ ಎಂದು ಹೇಳಿದರು.</p>.<p>ಪ್ರೊ. ಜಿ.ಎಂ. ಹಿರೇಮಠ ಮಾತನಾಡಿ, ‘ಪೋಷಕರು ತಮ್ಮ ಆಸಕ್ತಿಗಳನ್ನು ಮಕ್ಕಳ ಮೇಲೆ ಹೇರಬೇಡಿ. ಮಕ್ಕಳ ಅಭಿರುಚಿ, ಆಸಕ್ತಿ, ಪರಿಣತಿ ಗುರುತಿಸಿ ಆ ಕ್ಷೇತ್ರದಲ್ಲಿ ಅವರು ಸಾಧನೆ ಮಾಡಲು ಪ್ರೋತ್ಸಾಹಿಸಬೇಕು’ ಎಂದು ತಿಳಿಸಿದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಸೂಡಿಯ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಜಂಗಮ ಅಭಿವೃದ್ಧಿ ಸಂಘದ ಕಾರ್ಯಾಧ್ಯಕ್ಷ ಜಗದೀಶ ಕೂಡಲಮಠ, ದೀಕ್ಷಾ ಚಾರಿಟೇಬಲ್ ಫೌಂಡೇಷನ್ ಗೌರವಾಧ್ಯಕ್ಷ ಎನ್.ಎ. ಚರಂತಿಮಠ, ಮಹಾಂತೇಶ ಗಿರಿಮಠ, ಬಸವರಾಜ ಕಲ್ಯಾಣಮಠ, ಉದಯಕುಮಾರ ಇದ್ದರು.</p>.<div><blockquote>ಸಮಾಜದಲ್ಲಿ ಜಂಗಮರು ವಿಶಿಷ್ಟ ಸ್ಥಾನಮಾನ ಗಳಿಸಿದ್ದಾರೆ. ಈ ಸಮಾಜದ ಅನೇಕರು ಉನ್ನತ ಸ್ಥಾನದಲ್ಲಿದ್ದಾರೆ. ಮಕ್ಕಳು ಇವರನ್ನು ಸ್ಫೂರ್ತಿಯಾಗಿಸಿಕೊಳ್ಳಬೇಕು.</blockquote><span class="attribution">– ಆರ್.ಎಂ. ಹಿರೇಮಠ, ಜಂಗಮ ಅಭಿವೃದ್ದಿ ಸಂಘದ ಗೌರವಾಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದೊಂದೇ ಮುಖ್ಯವಲ್ಲ. ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಉದ್ಯಮಿ ಜಗದೀಶ ಹಿರೇಮಠ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನದಲ್ಲಿ ಹುಬ್ಬಳ್ಳಿ ಜಂಗಮ ಅಭಿವೃದ್ಧಿ ಸಂಘ, ದೀಕ್ಷಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಯಾವುದೇ ಕೆಲಸಕ್ಕೆ ಮುಂದಾದಾಗ ಸೋಲು ಎದುರಾಗುವುದು ಸಹಜ. ಸೋಲಿಗೆ ಎದೆಗುಂದದೆ ಸಾಧನೆಯತ್ತ ಮುನ್ನುಗ್ಗಬೇಕು. ಜೀವನದಲ್ಲಿ ಪ್ರಾಮಾಣಿಕತೆ, ಸಮಯಪಾಲನೆ, ವಿಶ್ವಾಸಾರ್ಹತೆ, ಸತತ ಪರಿಶ್ರಮ, ಶ್ರದ್ಧೆ ಮುಖ್ಯ. ಇವುಗಳಿದ್ದರೆ ಯಶಸ್ಸು, ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಕುಟುಂಬ ವ್ಯವಸ್ಥೆ ಕ್ರಮೇಣ ಹಾಳಾಗುತ್ತಿದೆ. ಸಂಸ್ಕೃತಿ, ಸಂಪ್ರದಾಯ ಉಳಿಸಿಕೊಂಡು ಹೋಗುವುದು ಇಂದಿನ ಅನಿವಾರ್ಯತೆ ಆಗಿದ್ದು, ಈ ದಿಕ್ಕಿನಲ್ಲಿ ಯುವಜನತೆ ಕಾರ್ಯಪ್ರವೃತ್ತರಾಗಬೇಕಿದೆ’ ಎಂದು ಹೇಳಿದರು.</p>.<p>ಪ್ರೊ. ಜಿ.ಎಂ. ಹಿರೇಮಠ ಮಾತನಾಡಿ, ‘ಪೋಷಕರು ತಮ್ಮ ಆಸಕ್ತಿಗಳನ್ನು ಮಕ್ಕಳ ಮೇಲೆ ಹೇರಬೇಡಿ. ಮಕ್ಕಳ ಅಭಿರುಚಿ, ಆಸಕ್ತಿ, ಪರಿಣತಿ ಗುರುತಿಸಿ ಆ ಕ್ಷೇತ್ರದಲ್ಲಿ ಅವರು ಸಾಧನೆ ಮಾಡಲು ಪ್ರೋತ್ಸಾಹಿಸಬೇಕು’ ಎಂದು ತಿಳಿಸಿದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಸೂಡಿಯ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಜಂಗಮ ಅಭಿವೃದ್ಧಿ ಸಂಘದ ಕಾರ್ಯಾಧ್ಯಕ್ಷ ಜಗದೀಶ ಕೂಡಲಮಠ, ದೀಕ್ಷಾ ಚಾರಿಟೇಬಲ್ ಫೌಂಡೇಷನ್ ಗೌರವಾಧ್ಯಕ್ಷ ಎನ್.ಎ. ಚರಂತಿಮಠ, ಮಹಾಂತೇಶ ಗಿರಿಮಠ, ಬಸವರಾಜ ಕಲ್ಯಾಣಮಠ, ಉದಯಕುಮಾರ ಇದ್ದರು.</p>.<div><blockquote>ಸಮಾಜದಲ್ಲಿ ಜಂಗಮರು ವಿಶಿಷ್ಟ ಸ್ಥಾನಮಾನ ಗಳಿಸಿದ್ದಾರೆ. ಈ ಸಮಾಜದ ಅನೇಕರು ಉನ್ನತ ಸ್ಥಾನದಲ್ಲಿದ್ದಾರೆ. ಮಕ್ಕಳು ಇವರನ್ನು ಸ್ಫೂರ್ತಿಯಾಗಿಸಿಕೊಳ್ಳಬೇಕು.</blockquote><span class="attribution">– ಆರ್.ಎಂ. ಹಿರೇಮಠ, ಜಂಗಮ ಅಭಿವೃದ್ದಿ ಸಂಘದ ಗೌರವಾಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>