<p><strong>ಹುಬ್ಬಳ್ಳಿ:</strong> ಕಳಸಾ ಬಂಡೂರಿ, ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮ ಹಾಗೂ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ನಾಡಿನ ಮಹನೀಯರ ಹೆಸರು ಇಡಬೇಕು ಎಂದು ಆಗ್ರಹಿಸಿ ಶನಿವಾರ ಹುಬ್ಬಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚಿಟಗುಪ್ಪಿ ಉದ್ಯಾನದ ಬಳಿ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿವರೆಗೆ ಡೋಲು ಬಾರಿಸುತ್ತ, ಚಕ್ಕಡಿ ಮೆರವಣಿಗೆ ನಡೆಸಿದರು. ಸಚಿವರ ಕಚೇರಿ ಎದುರು ಧರಣಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಆದ್ಯತೆ ಮೇರೆಗೆ ತುರ್ತು ಕ್ರಮ ಕೈಗೊಂಡು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು. ಸಚಿವರ ಆಪ್ತ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.</p>.<p>‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ರಾಜ್ಯ ಹಾಗೂ ಕೇಂದ್ರಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ಸಮಿತಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದರು.</p>.<p>ಸೆ.13ರಂದು ಹೋರಾಟ: ಮಹದಾಯಿ ಯೋಜನೆ ಅನುಷ್ಠಾನ ಮತ್ತು ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರು ಇಡುವ ಪ್ರಕ್ರಿಯೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಸೆ.13ರಂದು ಹುಬ್ಬಳ್ಳಿಯಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಸಮಿತಿ ಎಚ್ಚರಿಸಿದೆ.</p>.<p>ಚಂದ್ರಕಾಂತ ಗೋಕಾಕ, ಮಲ್ಲಿಕಾರ್ಜುನ ಕುನ್ನೂರು, ಕಪರಪ್ಪ ಗೊರಗುದ್ದಿ, ಮಲ್ಲಿಕಾರ್ಜುನ ತಾಲೂರ, ಯಲ್ಲಪ್ಪ ಕುಂದಗೋಳ, ಬಸವರಾಜ ಅಗಸಿಮನಿ, ಚಂದ್ರಣ್ಣ ಕುರುಬರ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-24-1850075559</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕಳಸಾ ಬಂಡೂರಿ, ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮ ಹಾಗೂ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ನಾಡಿನ ಮಹನೀಯರ ಹೆಸರು ಇಡಬೇಕು ಎಂದು ಆಗ್ರಹಿಸಿ ಶನಿವಾರ ಹುಬ್ಬಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚಿಟಗುಪ್ಪಿ ಉದ್ಯಾನದ ಬಳಿ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿವರೆಗೆ ಡೋಲು ಬಾರಿಸುತ್ತ, ಚಕ್ಕಡಿ ಮೆರವಣಿಗೆ ನಡೆಸಿದರು. ಸಚಿವರ ಕಚೇರಿ ಎದುರು ಧರಣಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಆದ್ಯತೆ ಮೇರೆಗೆ ತುರ್ತು ಕ್ರಮ ಕೈಗೊಂಡು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು. ಸಚಿವರ ಆಪ್ತ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.</p>.<p>‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ರಾಜ್ಯ ಹಾಗೂ ಕೇಂದ್ರಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ಸಮಿತಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದರು.</p>.<p>ಸೆ.13ರಂದು ಹೋರಾಟ: ಮಹದಾಯಿ ಯೋಜನೆ ಅನುಷ್ಠಾನ ಮತ್ತು ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರು ಇಡುವ ಪ್ರಕ್ರಿಯೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಸೆ.13ರಂದು ಹುಬ್ಬಳ್ಳಿಯಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಸಮಿತಿ ಎಚ್ಚರಿಸಿದೆ.</p>.<p>ಚಂದ್ರಕಾಂತ ಗೋಕಾಕ, ಮಲ್ಲಿಕಾರ್ಜುನ ಕುನ್ನೂರು, ಕಪರಪ್ಪ ಗೊರಗುದ್ದಿ, ಮಲ್ಲಿಕಾರ್ಜುನ ತಾಲೂರ, ಯಲ್ಲಪ್ಪ ಕುಂದಗೋಳ, ಬಸವರಾಜ ಅಗಸಿಮನಿ, ಚಂದ್ರಣ್ಣ ಕುರುಬರ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-24-1850075559</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>