<p><strong>ಹುಬ್ಬಳ್ಳಿ</strong>: ವಾರದಲ್ಲಿ ಕೆಲವು ದಿನ ಮಾತ್ರ ಸಂಚರಿಸುತ್ತಿದ್ದ ನೈರುತ್ಯ ರೈಲ್ವೆ ವಿಭಾಗದ ಮೂರು ರೈಲುಗಳ ಕಾಯಂ ಸಂಚಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಸೋಮವಾರ ಹಸಿರು ನಿಶಾನೆ ತೋರಿದರು.</p>.<p>ನಂತರ ಮಾತನಾಡಿದ ಅವರು, ‘ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ನೈರುತ್ಯ ರೈಲ್ವೆಯು ಪ್ರಮುಖ ವಿಶೇಷ ರೈಲುಗಳನ್ನು ‘ನಿಯಮಿತ ಸೇವೆ’ಗಳನ್ನಾಗಿ ಪರಿವರ್ತಿಸಿದೆ. ಇದು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಸಂಪರ್ಕ ಕ್ರಾಂತಿಗೆ ವೇಗ ನೀಡಲಿದೆ’ ಎಂದು ಹೇಳಿದರು.</p>.<p>‘ಈ ರೈಲುಗಳ ಕಾಯಂ ಸಂಚಾರದಿಂದಾಗಿ ಹಬ್ಬ ಮತ್ತು ರಜೆಯ ದಿನಗಳಲ್ಲಿ ಟಿಕೆಟ್ ಅಭಾವ ತಗ್ಗಲಿದ್ದು, ಟಿಕೆಟ್ ದರದಲ್ಲೂ ಶೇ 25-30 ರಷ್ಟು ಇಳಿಕೆಯಾಗಲಿದೆ. ಅಲ್ಲದೆ, ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನಿತ್ಯ ಪ್ರಯಾಣಿಕರು, ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದರು.</p>.<p>ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಸೇರಿದಂತೆ ರೈಲ್ವೆ ಅಧಿಕಾರಿಗಳು ಇದ್ದರು.</p>.<p>ಹೊಸ ರೈಲುಗಳ ವಿವರ: ಹುಬ್ಬಳ್ಳಿ–ವಿಜಯಪುರ ಪ್ಯಾಸೆಂಜರ್ ರೈಲು (56919) ಬೆಳಿಗ್ಗೆ 6.35ಕ್ಕೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 12.35ಕ್ಕೆ ವಿಜಯಪುರ ತಲುಪಲಿದೆ. ವಿಜಯಪುರ–ಹುಬ್ಬಳ್ಳಿ ಪ್ಯಾಸೆಂಜರ್ ರೈಲು (56920) ಮಧ್ಯಾಹ್ನ 12ಕ್ಕೆ ವಿಜಯಪುರದಿಂದ ಹೊರಟು, ಸಂಜೆ 6 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.</p>.<p>ಹುಬ್ಬಳ್ಳಿ– ವಿಜಯಪುರ ಮೆಮು ರೈಲು (66501) ಸಂಜೆ 4.45ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 10.10ಕ್ಕೆ ವಿಜಯಪುರ ತಲುಪಲಿದೆ. ವಿಜಯಪುರ–ಹುಬ್ಬಳ್ಳಿ ಮೆಮು ರೈಲು (66502) ಬೆಳಿಗ್ಗೆ 5.45ಕ್ಕೆ ವಿಜಯಪುರದಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಗೆ ಬರಲಿದೆ.</p>.<p>ಹುಬ್ಬಳ್ಳಿ – ಹೃಷಿಕೇಶ ನಡುವೆ ಈವರೆಗೆ ವಾರಕ್ಕೊಮ್ಮೆ ಮಾತ್ರ ರೈಲು (17363/64) ಸೇವೆ ಇತ್ತು. ಮೇ 12ರಿಂದ ಈ ರೈಲುಗಳು ಪ್ರತಿನಿತ್ಯ ಸಂಚರಿಸಲಿವೆ. ಪ್ರತಿದಿನ ಸಂಜೆ 7.45ಕ್ಕೆ ಹುಬ್ಬಳ್ಳಿಯಿಂದ ಹೊರಡುವ ರೈಲು, ಒಟ್ಟು 51 ಗಂಟೆ 45 ನಿಮಿಷ ಪ್ರಯಾಣದ ಬಳಿಕ ಯೋಗ ನಗರಿ ಹೃಷಿಕೇಶ ತಲುಪಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-24-1814635401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ವಾರದಲ್ಲಿ ಕೆಲವು ದಿನ ಮಾತ್ರ ಸಂಚರಿಸುತ್ತಿದ್ದ ನೈರುತ್ಯ ರೈಲ್ವೆ ವಿಭಾಗದ ಮೂರು ರೈಲುಗಳ ಕಾಯಂ ಸಂಚಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಸೋಮವಾರ ಹಸಿರು ನಿಶಾನೆ ತೋರಿದರು.</p>.<p>ನಂತರ ಮಾತನಾಡಿದ ಅವರು, ‘ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ನೈರುತ್ಯ ರೈಲ್ವೆಯು ಪ್ರಮುಖ ವಿಶೇಷ ರೈಲುಗಳನ್ನು ‘ನಿಯಮಿತ ಸೇವೆ’ಗಳನ್ನಾಗಿ ಪರಿವರ್ತಿಸಿದೆ. ಇದು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಸಂಪರ್ಕ ಕ್ರಾಂತಿಗೆ ವೇಗ ನೀಡಲಿದೆ’ ಎಂದು ಹೇಳಿದರು.</p>.<p>‘ಈ ರೈಲುಗಳ ಕಾಯಂ ಸಂಚಾರದಿಂದಾಗಿ ಹಬ್ಬ ಮತ್ತು ರಜೆಯ ದಿನಗಳಲ್ಲಿ ಟಿಕೆಟ್ ಅಭಾವ ತಗ್ಗಲಿದ್ದು, ಟಿಕೆಟ್ ದರದಲ್ಲೂ ಶೇ 25-30 ರಷ್ಟು ಇಳಿಕೆಯಾಗಲಿದೆ. ಅಲ್ಲದೆ, ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನಿತ್ಯ ಪ್ರಯಾಣಿಕರು, ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದರು.</p>.<p>ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಸೇರಿದಂತೆ ರೈಲ್ವೆ ಅಧಿಕಾರಿಗಳು ಇದ್ದರು.</p>.<p>ಹೊಸ ರೈಲುಗಳ ವಿವರ: ಹುಬ್ಬಳ್ಳಿ–ವಿಜಯಪುರ ಪ್ಯಾಸೆಂಜರ್ ರೈಲು (56919) ಬೆಳಿಗ್ಗೆ 6.35ಕ್ಕೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 12.35ಕ್ಕೆ ವಿಜಯಪುರ ತಲುಪಲಿದೆ. ವಿಜಯಪುರ–ಹುಬ್ಬಳ್ಳಿ ಪ್ಯಾಸೆಂಜರ್ ರೈಲು (56920) ಮಧ್ಯಾಹ್ನ 12ಕ್ಕೆ ವಿಜಯಪುರದಿಂದ ಹೊರಟು, ಸಂಜೆ 6 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.</p>.<p>ಹುಬ್ಬಳ್ಳಿ– ವಿಜಯಪುರ ಮೆಮು ರೈಲು (66501) ಸಂಜೆ 4.45ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 10.10ಕ್ಕೆ ವಿಜಯಪುರ ತಲುಪಲಿದೆ. ವಿಜಯಪುರ–ಹುಬ್ಬಳ್ಳಿ ಮೆಮು ರೈಲು (66502) ಬೆಳಿಗ್ಗೆ 5.45ಕ್ಕೆ ವಿಜಯಪುರದಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಗೆ ಬರಲಿದೆ.</p>.<p>ಹುಬ್ಬಳ್ಳಿ – ಹೃಷಿಕೇಶ ನಡುವೆ ಈವರೆಗೆ ವಾರಕ್ಕೊಮ್ಮೆ ಮಾತ್ರ ರೈಲು (17363/64) ಸೇವೆ ಇತ್ತು. ಮೇ 12ರಿಂದ ಈ ರೈಲುಗಳು ಪ್ರತಿನಿತ್ಯ ಸಂಚರಿಸಲಿವೆ. ಪ್ರತಿದಿನ ಸಂಜೆ 7.45ಕ್ಕೆ ಹುಬ್ಬಳ್ಳಿಯಿಂದ ಹೊರಡುವ ರೈಲು, ಒಟ್ಟು 51 ಗಂಟೆ 45 ನಿಮಿಷ ಪ್ರಯಾಣದ ಬಳಿಕ ಯೋಗ ನಗರಿ ಹೃಷಿಕೇಶ ತಲುಪಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-24-1814635401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>