<p>ಹುಬ್ಬಳ್ಳಿ: ‘ಸೌಕರ್ಯ, ಶಿಸ್ತುಗಳಿದ್ದರೆ ಸಾಲದು. ಸಾಧನೆಗೆ ಸೌಜನ್ಯವಿದ್ದರೇನೆ ಬೆಲೆ ನೆಲೆ. ನೀತಿ ನಿಯಮಗಳಿಲ್ಲದೇ ಸಮಾಜ, ನಾಡು ಬೆಳೆಯಲಾರದು’ ಎಂದು ಬಾಳೆಹೊನ್ನೂರಿನ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ವಿದ್ಯಾನಗರದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ 24ನೇ ವಾರ್ಷಿಕೋತ್ಸವ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.</p>.<p>‘ನಿರ್ಭಯದಿಂದ ಬಾಳುವುದೇ ನಿಜವಾದ ಬದುಕು. ವೀರಶೈವ ಧರ್ಮದಲ್ಲಿ ಆಧ್ಯಾತ್ಮ ಸಂಪತ್ತು ಬೆಟ್ಟದಷ್ಟಿದ್ದು, ಅದರ ಅರಿವು ಮತ್ತು ಆಚರಣೆಗೆ ಮನುಷ್ಯ ಬದ್ಧನಾದರೆ ಜೀವನ ಸುಖಮಯವಾಗುತ್ತದೆ. ರೇಣುಕಾಚಾರ್ಯರ ಆಧ್ಯಾತ್ಮ ಚಿಂತನೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಹಿಸುತ್ತವೆ’ ಎಂದರು.</p>.<p>ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ ಅಧ್ಯಕ್ಷೆ ಇಂದುಮತಿ ಮಾನ್ವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಮಂಗಲಾ ಹಿರೇಮಠ, ವಿದ್ಯಾ ಹೊರಕೇರಿ ಅವರಿಂದ ವೇದಘೋಷ ಜರುಗಿತು. ಮಹಿಳಾ ಮಂಡಳದ ಸದಸ್ಯರು ‘ವಿಭೂತಿ’ ಕಿರು ನಾಟಕ ಪ್ರದರ್ಶಿಸಿದರು.</p>.<p>ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀ, ರೇಣುಕ ಪ್ರಸಾದ್, ಪ್ರಕಾಶ ಬೆಂಡಿಗೇರಿ, ವಿಶ್ವನಾಥ ಹಿರೇಗೌಡರ, ಪ್ರಭಾವತಿ ಹಿರೇಮಠ, ವಾಣಿಶ್ರೀ ಹಿರೇಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-24-2010021573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಸೌಕರ್ಯ, ಶಿಸ್ತುಗಳಿದ್ದರೆ ಸಾಲದು. ಸಾಧನೆಗೆ ಸೌಜನ್ಯವಿದ್ದರೇನೆ ಬೆಲೆ ನೆಲೆ. ನೀತಿ ನಿಯಮಗಳಿಲ್ಲದೇ ಸಮಾಜ, ನಾಡು ಬೆಳೆಯಲಾರದು’ ಎಂದು ಬಾಳೆಹೊನ್ನೂರಿನ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ವಿದ್ಯಾನಗರದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ 24ನೇ ವಾರ್ಷಿಕೋತ್ಸವ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.</p>.<p>‘ನಿರ್ಭಯದಿಂದ ಬಾಳುವುದೇ ನಿಜವಾದ ಬದುಕು. ವೀರಶೈವ ಧರ್ಮದಲ್ಲಿ ಆಧ್ಯಾತ್ಮ ಸಂಪತ್ತು ಬೆಟ್ಟದಷ್ಟಿದ್ದು, ಅದರ ಅರಿವು ಮತ್ತು ಆಚರಣೆಗೆ ಮನುಷ್ಯ ಬದ್ಧನಾದರೆ ಜೀವನ ಸುಖಮಯವಾಗುತ್ತದೆ. ರೇಣುಕಾಚಾರ್ಯರ ಆಧ್ಯಾತ್ಮ ಚಿಂತನೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಹಿಸುತ್ತವೆ’ ಎಂದರು.</p>.<p>ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ ಅಧ್ಯಕ್ಷೆ ಇಂದುಮತಿ ಮಾನ್ವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಮಂಗಲಾ ಹಿರೇಮಠ, ವಿದ್ಯಾ ಹೊರಕೇರಿ ಅವರಿಂದ ವೇದಘೋಷ ಜರುಗಿತು. ಮಹಿಳಾ ಮಂಡಳದ ಸದಸ್ಯರು ‘ವಿಭೂತಿ’ ಕಿರು ನಾಟಕ ಪ್ರದರ್ಶಿಸಿದರು.</p>.<p>ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀ, ರೇಣುಕ ಪ್ರಸಾದ್, ಪ್ರಕಾಶ ಬೆಂಡಿಗೇರಿ, ವಿಶ್ವನಾಥ ಹಿರೇಗೌಡರ, ಪ್ರಭಾವತಿ ಹಿರೇಮಠ, ವಾಣಿಶ್ರೀ ಹಿರೇಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-24-2010021573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>