<p><strong>ಹುಬ್ಬಳ್ಳಿ:</strong> ತಾಲ್ಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ಕೆಎಂಸಿ-ಆರ್ಐ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ(26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ.</p><p>ಎಸ್ಪಿ ಗೋಪಾಲ ಬ್ಯಾಕೋಡ, ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐದು ಮಂದಿ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ತಾಲ್ಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ಕೆಎಂಸಿ-ಆರ್ಐ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ(26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ.</p><p>ಎಸ್ಪಿ ಗೋಪಾಲ ಬ್ಯಾಕೋಡ, ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐದು ಮಂದಿ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>